ರಾಜ್ಯಪಾಲರಿಗೆ ಆಮಂತ್ರಣ ಪತ್ರಿಕೆ ನೀಡಿದ ನಟ ಧನಂಜಯ್!

0
Spread the love

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಮದುವೆಯ ಸಂಭ್ರಮದಲ್ಲಿದ್ದಾರೆ. ಡಾಲಿ-ಧನ್ಯತಾ ಜೋಡಿ ಈಗಾಗಲೇ ಕನ್ನಡ ಸಿನಿಮಾದ ನಟ, ನಟಿಯರು, ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಡುತ್ತಿದ್ದಾರೆ. ಇದೀಗ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಡಾಲಿ ಮದುವೆ ಪತ್ರಿಕೆ ನೀಡಿದ್ದಾರೆ.

Advertisement

ಅಂದಹಾಗೆ, ಡಾಲಿ ಧನಂಜಯ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಮಾಜಿ ಪಿಎಂ ದೇವೇಗೌಡ, ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮದುವೆಗೆ ಆಹ್ವಾನಿಸಿದ್ದಾರೆ. ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಫೆ.16ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗಿಯಾಲಿದ್ದಾರೆ.


Spread the love

LEAVE A REPLY

Please enter your comment!
Please enter your name here