ಬೆಂಗಳೂರು: ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದ ಹಸುಗಳ ಕೆಚ್ಚಲು ಕೋಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಮೂರು ಹಸುಗಳನ್ನು ಕೊಡಿಸುತ್ತೇನೆ ಅಂದಿದ್ದಾರೆ.
ಸಚಿವ ಜಮೀರ್ಗೆ ಭಾವನೆಯೇ ಇಲ್ಲ, ಅದೇನು ಆಟದ ವಸ್ತುವೇ? ಸಾವಿರ ಗೋವು ತಂದು ಕೊಟ್ಟರೂ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ. ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ ಎಂದು ವಾಗ್ದಾಳಿ ಮಾಡಿದರು.
ಇನ್ನೂ ಮುಸ್ಲಿಮರಲ್ಲಿ ಒಳ್ಳೆಯವರಿದ್ದಾರೆ, ಆದರೆ ನಾಯಕತ್ವ ಪ್ರಶ್ನಿಸುತ್ತಿದ್ದೇನೆ. ಎಫ್ಐಆರ್ ಸರಿಯಾಗಿ ಹಾಕಿಲ್ಲ, ಅಮಾಯಕನನ್ನು ಕರೆತಂದು ಕೂರಿಸಿದ್ದಾರೆ. ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ್ದಾರೆ. ಪ್ರಕರಣ ಮುಚ್ಚಿಹಾಕಲು ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ನಿಜವಾದ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.