ಕಾಫಿನಾಡಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ: ಓರ್ವ ಯುವಕನಿಗೆ ಸೋಂಕು ಪತ್ತೆ; ಆರೋಗ್ಯ ಇಲಾಖೆ ಅಲರ್ಟ್!

0
Spread the love

ಚಿಕ್ಕಮಗಳೂರು:- ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ ಶುರುವಾಗಿದ್ದು, ಓರ್ವ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

Advertisement

ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಂಗನ ಕಾಯಿಲೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿದೆ.‌ ತೀವ್ರ ಜ್ವರದಿಂದ‌ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ಬಂದಿರುವ ದೃಢವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಿ‌ ಮಂಗನ ಕಾಯಿಲೆ‌ ಪತ್ತೆಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ಮತ್ತಿಖಂಡ‌ ಗ್ರಾಮದಲ್ಲಿ ಉಣ್ಣೆಗಳನ್ನ ಸಂಗ್ರಹ ಮಾಡಲಾಗಿದೆ. ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗಿದೆ. ಗಾಯದ ಮೇಲೆ ಬರೆ ಎಂಬಂತೆ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಆತಂಕ ಹುಟ್ಟಿಸಿದೆ.


Spread the love

LEAVE A REPLY

Please enter your comment!
Please enter your name here