ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ರವಿ ಪಾಟೀಲ್ ಹೇಳಿದ್ದೇನು..?

0
Spread the love

ಬೆಳಗಾವಿ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಇನ್ನೂ ಈ ಬಗ್ಗೆ ಡಾ.ರವಿ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 24 ಗಂಟೆಯಲ್ಲಿ ಹೆಬ್ಬಾಳ್ಕರ್‌ ಆರೋಗ್ಯ ಚೆನ್ನಾಗಿ ಚೇತರಿಕೆ ಕಂಡಿದೆ. ಸಚಿವರ ಬೆನ್ನುಹುರಿ ಪೆಟ್ಟಾಗಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದರು.

ವೈದ್ಯರು ಹೇಳಿದ್ದೇನು?
ಹೆಬ್ಬಾಳ್ಕರ್‌ ಮತ್ತು ಸಹೋದರ ಚನ್ನರಾಜ್ ಇಬ್ಬರೂ ಔಟ್ ಆಫ್ ಡೇಂಜರ್ ಇದ್ದಾರೆ. ಅವರ ಗನ್ ಮ್ಯಾನ್, ಕಾರ್‌ ಚಾಲಕ ಸಹ ಆರೋಗ್ಯವಾಗಿದ್ದಾರೆ. ಸಚಿವರು ಒಂದು ವಾರ ವಿಶ್ರಾಂತಿ ಪಡೆಯಬೇಕು. ಚನ್ನರಾಜ್ ಅವರಿಗೂ ವಿಶ್ರಾಂತಿ ಪಡೆಯಲು ಸೂಚಿಸಿದ್ದೇವೆ.

ಮಂಗಳವಾರ ಎಂಆರ್‌ಐ, ಎಕ್ಸ್‌ರೇ ತೆಗೆಸಿ ತಪಾಸಣೆ ಮಾಡಿದ್ದೇವೆ. ಇಂದು ಅವರ ಅವರ ರಕ್ತವನ್ನು ಪರೀಕ್ಷೆಗೆ ಕಳುಹಿಸಿದ್ದೇವೆ. ಸಚಿವರಿಗೆ ಹೈಪ್ರೋಟಿನ್ ಆಹಾರ ಸೇವಿಸಲು ಸಲಹೆ ಕೊಟ್ಟಿದ್ದೇವೆ. ಪನ್ನೀರ್‌, ಡ್ರೈ ಫ್ರೂಟ್ಸ್‌ ತೆಗೆದುಕೊಳ್ಳಲು ಹೇಳಿದ್ದೇವೆ ಎಂದರು.


Spread the love

LEAVE A REPLY

Please enter your comment!
Please enter your name here