ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಕೇಸ್ ದಾಖಲಾಗಿದೆ. ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿದ್ದ ಬಿಎಸ್ವೈ ಅವರ ಅರ್ಜಿ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದೆ. ಹಿರಿಯ ವಕೀಲ ರವಿವರ್ಮ ಕುಮಾರ್ ನೇತೃತ್ವದ ಪ್ರಾಸಿಕ್ಯೂಶನ್ನಿಂದ ವಾದ ಇಂದು ಮುಗಿದಿದೆ.
ನ್ಯಾ| ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠವು ಈ ಪ್ರಕರಣದಲ್ಲಿ ಆರೋಪಿ ಬಿಎಸ್ವೈ ಪರ ವಕೀಲರ ವಾದಕ್ಕೆ ಜನವರಿ 17 ಅನ್ನು ನಿಗದಿ ಮಾಡಿದೆ.
ಅರ್ಜಿಯು ಏಕೆ ಊರ್ಜಿತವಾಗುವುದಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಒಂದಷ್ಟು ತೀರ್ಪುಗಳು ಇವೆ ಎಂದು ವಕೀಲರು ಕೆಲವು ತೀರ್ಲುಗಳನ್ನು ಓದಿದರು. ವ್ಯವಸ್ಥಿತ ಪ್ರಯತ್ನವನ್ನು ಬಿಎಸ್ವೈ ಮಾಡಿದ್ದಾರೆ. ದೂರುದಾರೆ ಸಾವನ್ನಪ್ಪಿದ ಮೇಲೆ ನ್ಯಾಯಾಲಯದ ಮುಂದೆ ಬಂದಿದ್ದಾರೆ ಎಂದು ಪ್ರೊ. ರವಿವರ್ಮ ಕುಮಾರ್ ಹೇಳಿದರು.
ಇನ್ನು ವಕೀಲರ ವಾದವನ್ನು ಆಲಿಸಿದ ಹೈಕೋರ್ಟ್ ಜನವರಿ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇನ್ನೂ ವಿಚಾರಣೆಯಲ್ಲಿ ಯಡಿಯೂರಪ್ಪ ಖುದ್ದಾಗಿ ಹಾಜರಾಗುವುದರಿಂದ ನೀಡಲಾಗಿದ್ದ ವಿನಾಯಿತಿಯನ್ನೂ ಹೈಕೋರ್ಟ್ ವಿಸ್ತರಣೆ ಮಾಡಿದೆ. ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ಯಡಿಯೂರಪ್ಪ ಪರ ವಾದ ಮಾಡುತ್ತಿದ್ದಾರೆ.