ಬೆಂಗಳೂರಿನಲ್ಲಿ ನಡೆದ ಮಾದ್ಯಮಗೋಷ್ಠಿಯಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ: ಸತೀಶ್ ಜಾರಕಿಹೊಳಿ!

0
Spread the love

ಬೆಳಗಾವಿ: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದ ಮಾದ್ಯಮಗೋಷ್ಠಿಯಲ್ಲಿ ನನ್ನ ಕೆಲ ಹೇಳಿಕೆ ತಿರುಚಲಾಗಿದೆ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಬೇಸರ ಹೊರ ಹಾಕಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಲ್ಲಿ ಇಂದು ಬೆಳಗ್ಗೆ ನಡೆದ ಮಾದ್ಯಮಗೋಷ್ಠಿಯಲ್ಲಿ ನನ್ನ ಕೆಲ ಹೇಳಿಕೆ ತಿರುಚಲಾಗಿದೆ. ಡಿಕೆ ಶಿವಕುಮಾರ ಬದಲಾವಣೆಗೆ ನಾನು ಯಾವುದೆ ಹೇಳಿಕೆ ನೀಡಿಲ್ಲ. ಪಕ್ಷದ ಸಂಘಟನೆ, ಚುನಾವಣೆ ದೃಷ್ಟಿಯಿಂದ ಕೆಲವು ಸಲಹೆಗಳನ್ನು ನೀಡಿದ್ದೇನೆ.

ಕೆಲವು ಮಾದ್ಯಮಗಳಲ್ಲಿನ ವರದಿ ಗಮನಿಸಿ ಸಾರ್ವಜನಿಕರು ತಪ್ಪು ತಿಳಿದುಕೊಳ್ಳಬೇಡಿ. ಮುಂದಿನ ವಾರ ದೆಹಲಿಗೆ ಹೋಗುತ್ತೇನೆಂದು ಹೇಳಿದ್ದು, ಹೈಕಮಾಂಡ್ ಭೇಟಿಗಲ್ಲ, ಕರ್ನಾಟಕ ಭವನದ ಕಟ್ಟಡ ಉದ್ಘಾಟನೆಗೆ ಹೊರಟ್ಟಿದ್ದೇನೆ.‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here