ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಂಜುಂಡೇಗೌಡ (ಲೋಕೇಶ್) (44) ಕೊಲೆಯಾದ ವ್ಯಕ್ತಿಯಾಗಿದ್ದು,
ರೈತರಿಂದ ಹಾಲು ಸಂಗ್ರಹ ಮಾಡಿಕೊಂಡು ಡೈರಿಗೆ ಹಾಲು ಹಾಕಲು ಮಹೀಂದ್ರ ಜಿತೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಮರದ ಪಟ್ಟಿಗೆ ಮೊಳೆ ಇಟ್ಟು ವಾಹನ ಪಂಚರ್ ಮಾಡಿದ್ದ ದುಷ್ಕರ್ಮಿಗಳು,
ವಾಹನ ಪಂಕ್ಚರ್ ಆದ ಕೂಡಲೇ ಕೆಳಗಿಳಿದ ನಂಜುಂಡೇಗೌಡನನ್ನು ಲಾಂಗ್ಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ತಲೆ, ಕುತ್ತಿಗೆ, ಕೈ ಕತ್ತರಿಸಿದ್ದು, ಲಾಂಗ್ ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಗಂಭೀರ ಗಾಯಗೊಂಡ ನಂಜುಂಡೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.