ಬೆಂಗಳೂರು:– ಕರ್ನಾಟಕದಲ್ಲಿ ಕಾಂಟ್ರವರ್ಸಿ ನಡೆಯಬಾರದು ಎಂದು ಹೇಳುವ ಮೂಲಕ “ಕೈ”ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ ಕೊಟ್ಟಿದ್ದಾರೆ.
ಕಾಂಗ್ರೆಸ್ನಲ್ಲಿ ಗೊಂದಲ ವಿಚಾರವಾಗಿ ಮಾತನಾಡಿದ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್ಗೆ ಗೊತ್ತಿದೆ ಎಂದರು.
ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಆಗ ತೆಗೆದುಕೊಳ್ಳುತ್ತದೆ. ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ. ದಯವಿಟ್ಟು ಕಾಂಟ್ರವರ್ಸಿ ರಾಜ್ಯದಲ್ಲಿ ನಡೆಯಬಾರದು ಎಂದು ಸೂಚನೆ ನೀಡಿದ್ದಾರೆ.
ಆಗ, ಈಗ, ಯಾವಾಗ ಅದೆಲ್ಲ ಇಲ್ಲ. ಯಾವಾಗ ಮಾಡಬೇಕು ಬಿಡಬೇಕು ಹೈಕಮಾಂಡ್ಗೆ ಗೊತ್ತಿದೆ. ಆಗ ಸಿಎಂ ಚೇಂಜ್ ಆಗುತ್ತಾರೆ, ಈಗ ಡಿಸಿಎಂ ಚೇಂಜ್ ಆಗುತ್ತಾರೆ ಅದೆಲ್ಲ ಹೇಳಬೇಡಿ. ನಾನಿದ್ದೇನೆ, ರಾಹುಲ್ ಗಾಂಧಿ ಇದ್ದಾರೆ. ಯಾವಾಗ ಏನು ಮಾಡಬೇಕು ಅಂತ ನಮಗೆ ಟಾರ್ಗೆಟ್ ಇರುತ್ತದೆ. ಅದನ್ನು ನೋಡಿಕೊಂಡು ನಾವೇ ನಿರ್ಣಯ ಮಾಡುತ್ತೇವೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.