ಕೋವಿಡ್-19 ನಿಯಂತ್ರಣ, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ; ಡಿಸಿ ಸುಂದರೇಶ್ ಬಾಬು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳು ಎರಡನೇ ಅಲೆಯ ಭೀತಿಯನ್ನು ಸೃಷ್ಟಿಸುತ್ತಿದ್ದು, ಇದನ್ನು ತಡೆಗಟ್ಟಲು ಕೋವಿಡ್-19 ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವುದು ಇತ್ಯಾದಿಗಳ ಕುರಿತು ಆರೋಗ್ಯ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು.

ವಿವಿಧ ಸಮಾರಂಭಗಳು ಹಾಗೂ ಆಚರಣೆಯ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯವು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ ಈ ಕೆಳಕಂಡಂತೆ ಸೂಚಿಸಿದ ಸಂಖ್ಯೆಯನ್ನು ಮೀರದಂತೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಆಚರಣೆಗಳು, ಸಮಾರಂಭಗಳು ಜರುಗುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ವ್ಯಕ್ತಿಗೆ 3.25ಸ್ಕ್ವೇರ್ ಮೀಟರ್ ಮಾನದಂಡವನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಮದುವೆಗೆ ತೆರೆದ ಪ್ರದೇಶಗಳಲ್ಲಿ 500 ಜನರು ಹಾಗೂ ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 200 ಜನರು ಮೀರದಂತೆ ಪ್ರವೇಶಕ್ಕೆ ಅವಕಾಶವಿದೆ.

ಜನ್ಮದಿನ ಹಾಗೂ ಇತರ ಆಚರಣೆಗಳಲ್ಲಿ ತೆರೆದ ಪ್ರದೇಶಗಳಲ್ಲಿ 100 ಜನರಿಗೆ ಹಾಗೂ ಸಭಾಂಗಣ , ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50 ಜನರು ಮೀರದಂತೆ ಅವಕಾಶವಿದೆ.

ನಿಧನ, ಶವಸಂಸ್ಕಾರಗಳಿಗೆ ತೆರೆದ ಪ್ರದೇಶಗಳಲಿ 100 ಜನರು ಹಾಗೂ ಸಭಾಂಗಣಗಳು, ಹಾಲ್, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50 ಜನರಿಗೆ ಅವಕಾಶವಿದೆ. ಇತರೆ ಸಮಾರಂಭಗಳಿಗೆ ಹಾಲ್‌ನ ವಿಸ್ತೀರ್ಣಕ್ಕೆ ಅನುಗುಣವಾಗಿ 100 ಜನರು ಮೀರದಂತೆ, ಧಾರ್ಮಿಕ ಆಚರಣೆಗಳು, ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನರು ಮೀರದಂತೆ, ರಾಜಕೀಯ ಆಚರಣೆಗಳು, ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನರು ಮೀರದಂತೆ ಅವಕಾಶವಿರುತ್ತದೆ.

ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ವಿಧಿಸಿದ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here