ಸರಣಿ ಅಪಘಾತ: ಲಾರಿ ಕೆಳಗೆ ಅಪ್ಪಚ್ಚಿಯಾದ ಕಾರು, ಪವಾಡ ರೀತಿಯಲ್ಲಿ ಚಾಲಕ ಬಚಾವ್!

0
Spread the love

ನೆಲಮಂಗಲ:- ಸರಣಿ ಅಪಘಾತದಲ್ಲಿ ಲಾರಿ ಕೆಳಗೆ ಕಾರು ಸಿಲುಕಿ ಅಪ್ಪಚ್ಚಿಯಾದರೂ ಪವಾಡ ಎನ್ನುವ ರೀತಿಯಲ್ಲಿ ಚಾಲಕ ಬಚಾವ್ ಆಗಿರುವ ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

Advertisement

ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯೊಡೆದಿದೆ, ಕಾರಿಗೆ ಹಿಂಬದಿಯಿಂದ ಟೂರಿಸ್ಟ್‌ ಬಸ್ ಡಿಕ್ಕಿ ಹೊಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಭೀಕರ ಅಪಘಾತದಲ್ಲಿ ಕಾರು ಚಾಲಕ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಬಚಾವ್‌ ಆಗಿದ್ದಾರೆ. ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here