ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಪತಿ ಸಾವು: ಜಿ. ಪರಮೇಶ್ವರ್ ಗೆ ತಾಳಿ ಕಳುಹಿಸಿದ ಮೃತನ ಹೆಂಡ್ತಿ!

0
Spread the love

ರಾಯಚೂರು:- ಮೈಕ್ರೋ ಫೈನಾನ್ಸ್​ ಕಿರುಕುಳದಿಂದ ಪತಿ ಸಾವನ್ನಪ್ಪಿದ ಬೆನ್ನಲ್ಲೇ ಗೃಹ ಸಚಿವರಿಗೆ ಮೃತನ ಪತ್ನಿ ಮಾಂಗಲ್ಯ ಸರ ಕಳುಹಿಸಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.

Advertisement

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​ಗಳ ಕಿರುಕುಳ ಹೆಚ್ಚಾಗುತ್ತಲೇ ಇದೆ. ಈ ಕಾರಣದಿಂದ ಇದೇ ಜನವರಿ 17 ರಂದು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಶರಣಬಸವ ಎನ್ನುವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ತಡವಾಗಿ ಬೆಳಕಿಗೆ ಬಂದಿತ್ತು.

ಶರಣಬಸವನಿಗೆ ಸಾಲ ಕೊಟ್ಟಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಟಾರ್ಚರ್ ಕೊಡುತ್ತಿದ್ದರಂತೆ. ಈ ಬಗ್ಗೆ ಗೊತ್ತಾದ ಬಳಿಕ ಇದೇ ಗ್ರಾಮದ ಹಲವರು ಕೂಡ ಫೈನಾನ್ಸ್ ಕಂಪನಿ ಕಣ್ತಪ್ಪಿಸಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದರ ಬೆನ್ನಲ್ಲೇ ಈಗ ಮೃತ ಶರಣಬಸವನ ಕುಟುಂಬ ನ್ಯಾಯಕ್ಕಾಗಿ ಹೋರಾಟಕ್ಕೆ ಸಜ್ಜಾಗಿದೆ. ಶರಣಬಸವ ಡ್ರೈವಿಂಗ್ ಜೊತೆ ಕೂಲಿ ಕೆಲಸವನ್ನೂ ಮಾಡುತ್ತಿದ್ದರು. ಆದರೆ ಕೆಲ ಖಾಸಗಿ ಕಂಪನಿಗಳಿಂದ ಸುಮಾರು 6-8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಕೆಲ ಕಂತುಗಳು ಬಾಕಿ ಇದ್ದ ಹಿನ್ನೆಲೆ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗುತ್ತಂತೆ. ಇದೇ ಕಾರಣಕ್ಕೆ ಶರಣಬಸವ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಈಗ ಮೃತನ ಕುಟುಂಬ ಇಂದು ಸ್ಥಳೀಯ ಹೋರಾಟಗಾರರ ಜೊತೆಗೆ ಒಗ್ಗೂಡಿ ಹೋರಾಟಕ್ಕಿಳಿದಿದ್ದಾರೆ. ಘಟನೆ ನೆನೆದು ಮೃತನ ಪತ್ನಿ ಕಣ್ಣೀರಿಟ್ಟಿದ್ದಾರೆ.

ಪತಿ ಶರಣಬಸವ ಸಾವಿನ ಬಳಿಕ ಪತ್ನಿ ಪಾರ್ವತಿ ಎಲ್ಲಾ ಕಾರ್ಯಗಳನ್ನ ಮುಗಿಸಿಕೊಂಡಿದ್ದು, ಈಗ ಆಕೆಯ ಮಾಂಗಲ್ಯ ಸರವನ್ನ ಗೃಹ ಸಚಿವರಿಗೆ ರವಾನಿಸಿದ್ದಾರೆ. ನನ್ನ ಪತಿ ಸಾಲ ಮಾಡಿದ್ದಕ್ಕೆ ಸಿಬ್ಬಂದಿ ಕಿರುಕುಳ ನೀಡಿದ್ದಾರೆ. ಅದರ ವಿರುದ್ಧ ಕ್ರಮವಾಗಬೇಕು ಅಂತ ಪೋಸ್ಟ್ ಮೂಲಕ ಗೃಸಚಿವರಿಗೆ ಮಾಂಗಲ್ಯ ಸರವನ್ನ ರವಾನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here