HomeEntertainmentಸೆನ್ಸಾರ್ ನಲ್ಲಿ ಗೆದ್ದ ನಿನ್ನ ಸನಿಹಕೆ;ಥಿಯೇಟರ್ ಗೆ ಲಗ್ಗೆ ಇಡಲು ತಯಾರು

ಸೆನ್ಸಾರ್ ನಲ್ಲಿ ಗೆದ್ದ ನಿನ್ನ ಸನಿಹಕೆ;
ಥಿಯೇಟರ್ ಗೆ ಲಗ್ಗೆ ಇಡಲು ತಯಾರು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನಟ ಸೂರಜ್ ಗೌಡ ಪ್ರಪ್ರಥಮ ಬಾರಿಗೆ ನಿರ್ದೇಶಿಸಿ, ನಟಿಸಿರೋ ಯೂಥ್ ಫುಲ್ ಲವ್ ಸ್ಟೋರಿ ನಿನ್ನ ಸನಿಹಕೆ. ದೊಡ್ಮನೆಯ ಕುಡಿ ಧನ್ಯರಾಮ್ ಕುಮಾರ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋ ಸಿನಿಮಾ. ರಘು ದೀಕ್ಷಿತ್ ಸಂಗೀತ ಸಂಯೋಜನೆ ಇರೋ ಈ ಚಿತ್ರದ ಹಾಡುಗಳು ಈಗಾಗ್ಲೇ ಕನ್ನಡ ಸಿನಿಪ್ರಿಯರ ಮನ ಸೆಳೀತಿವೆ. ಹಾಡಿನಿಂದ ಹಾಡಿಗೆ ವಿಶಿಷ್ಠವಾಗಿ ವಿನೂತನವಾಗಿ ಕೇಳುತ್ತಿರುವ, ನೋಡೋದಕ್ಕೂ ಅಷ್ಟೇ ಬ್ಯೂಟಿಫುಲ್ ಆಗಿ ಕಾಣ್ತಿವೆ.

ಪೋಸ್ಟರ್ ನಿಂದ ಸಿನಿಮಾ ಮೇಕಿಂಗ್ ಕ್ವಾಲಿಟಿಯಿಂದ ಕನ್ನಡ ಚಿತ್ರರಂಗದಲ್ಲಿ ವಿಶೇಷ ನಿರೀಕ್ಷೆಯನ್ನ ಭರವಸೆಯನ್ನ ಹುಟ್ಟಿಸಿರೋ ಈ ಚಿತ್ರವನ್ನ ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿ ವೀಕ್ಷಿಸಿ, ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾ ಬಗ್ಗೆ ವಿಶೇಷವಾದ ಪ್ರಶಂಸೆಯನ್ನ ಸೆನ್ಸಾರ್ ಮಂಡಳಿಯ ಸದಸ್ಯರು ಚಿತ್ರತಂಡಕ್ಕೆ ನೀಡಿದ್ದು, ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಸಿನಿಮಾ ಬಗ್ಗೆ ಟಾಕ್ ದೊಡ್ಡದಾಗಿದೆ.

ಇನ್ನು ಇತೀಚೆಗಷ್ಟೇ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮಜಾಟಾಕೀಸ್ ಕಾರ್ಯಕ್ರಮಕ್ಕೆ ಹೋಗಿದ್ದ ನಿನ್ನ ಸನಿಹಕೆ ಟೀಮ್ ಗೆ ದೊಡ್ಡ ಸರ್ಪೈಸ್ ಕಾದಿತ್ತು. ಸೃಜನ್ ಲೋಕೇಶ್ ನೇತೃತ್ವದ ಈ ಕಾರ್ಯಕ್ರಮದಲ್ಲಿ ಧನ್ಯಾ ರಾಮ್ ಕುಮಾರ್ ಅವರಿಗೊಂದು ಸರ್ಪೈಸ್ ಗಿಫ್ಟ್ ಸಿಕ್ಕಿದೆ. ತಮ್ಮ ಅಕ್ಕನ ಮಗಳ ಬಾಲ್ಯದ ದಿನಗಳನ್ನು ಅವ್ರ ಪ್ರತಿಭೆಯ ಬಗ್ಗೆ ವಿಶೇಷವಾದ ಮಾತುಗಳನ್ನು ಆಡೋದ್ರ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಧನ್ಯಾರವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಪವರ್ ಸ್ಟಾರ್ ಜೊತೆಗೆ ಡಾ. ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಕೂಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋ ಸಹೋದರಿಯ ಮಗಳ ಈ ಪ್ರಯತ್ನಕ್ಕೆ ಸಂತಸ ವ್ಯಕ್ತಪಡಿಸೋದ್ರ ಜೊತೆಗೆ ಒಂದಷ್ಟು ಸಲಹೆಗಳನ್ನು ಕೊಟ್ಟು, ಧನ್ಯಾರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ವಿಶೇಷ ಅಂದ್ರೆ ಧನ್ಯಾರ ತಂದೆ ರಾಮ್ ಕುಮಾರ್ ಇದೇ ಮೊದಲ ಬಾರಿಗೆ ಮಗಳ ಬಗ್ಗೆ, ಮಗಳ ಚೊಚ್ಚಲ ಚಿತ್ರದ ಬಗ್ಗೆ ಭಾವುಕತೆಯಿಂದ, ಹೆಮ್ಮೆಯಿಂದ ಮಾತನಾಡಿದ್ದಾರೆ. ನಿನ್ನ ಸನಿಹಕೆ ಚಿತ್ರದ ಹಾಡುಗಳನ್ನು ನೋಡಿ, ಈ ಸಿನಿಮಾ ತುಂಬಾ ದೊಡ್ಡ ಯಶಸ್ಸು ಕಾಣುವ ಲಕ್ಷಣಗಳು ಕಾಣಿಸ್ತಿವೆಯೆಂದು ಹೇಳುತ್ತಾ.. ಮುದ್ದಿನ ಮಗಳ ಚಿತ್ರರಂಗ ಪ್ರವೇಶವನ್ನು ಸಂತಸದಿಂದ ಸ್ವಾಗತಿಸಿದ್ದಾರೆ.

ಏಪ್ರಿಲ್ 16ಕ್ಕೆ ತೆರೆಗೆ ಬರ್ತಿದೆ ನಿನ್ನ ಸನಿಹಕೆ.

ವೈಟ್ ಅಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ನಡಿಯಲ್ಲಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ನಿರ್ಮಿಸಿರೋ ಈ ಯೂಥ್ ಫುಲ್ ಎಂಟ್ರಟೈನರ್ ನಿನ್ನ ಸನಿಹಕೆ ಇದೇ ಏಪ್ರಿಲ್ 16ಕ್ಕೆ ವಿಶ್ವದಾದ್ಯಂತ ಕನ್ನಡದಲ್ಲಿ ಮಾತ್ರವೇ ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದೆ. ಸದ್ಯದಲ್ಲೇ ಟ್ರೈಲರ್ ಲಾಂಚ್ ಮಾಡೋ ಯೋಜನೆಯಲ್ಲಿರೋ ಚಿತ್ರತಂಡ ಈ ಮೂಲಕ ಪ್ರಚಾರದ ಕೆಲಸಗಳನ್ನು ಶುರುಮಾಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!