Lawyer Jagadish: ಬಿಗ್‌ ಬಾಸ್‌ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್‌!

0
Spread the love

ಬೆಂಗಳೂರು: ಬಿಗ್​ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಆಗಿದ್ದ, ಸಾಮಾಜಿಕ ಹೋರಾಟಗಾರನಾಗಿಯೂ ಗುರುತಿಸಿಕೊಂಡಿರುವ ಲಾಯರ್ ಜಗದೀಶ್ ಮೇಲೆ ಅಗಂತುಕ ಗುಂಪೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಜಗದೀಶ್​ಗೆ ಗಾಯಗಳಾಗಿವೆ, ಅವರ ಪುತ್ರನ ಮೇಲೂ ಹಲ್ಲೆ ಆಗಿದೆ ಎಂದು ರಕ್ತ ಒರಸುತ್ತಿದ್ದ ಸ್ಥಿತಿಯಲ್ಲಿಯೇ ಲಾಯರ್ ಜಗದೀಶ್ ಲೈವ್ ಬಂದು ಆರೋಪ ಮಾಡಿದ್ದರು.

Advertisement

ಅದಲ್ಲದೆ ನಿನ್ನೆ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಕೀಲ ಜಗದೀಶ್ ಮತ್ತು ಅವರ ಗನ್​ ಮ್ಯಾನ್​ನನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.


Spread the love

LEAVE A REPLY

Please enter your comment!
Please enter your name here