ಬೆಳಗಾವಿ: ವಿರೋಧದ ಬಗ್ಗೆ ಮಾತನಾಡಿದರೆ ಹೈಕಮಾಂಡ್ ನೋಟಿಸ್ ನೀಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಮಾತನಾಡಿದ ಅವರು, ಶ್ರೀರಾಮುಲು ಪಕ್ಷಕ್ಕೆ ಬರಲು ನನ್ನ ವಿರೋಧವಿಲ್ಲ.
Advertisement
ಶ್ರೀರಾಮುಲು ಪಕ್ಷಕ್ಕೆ ಬರುತ್ತಾರೆ ಎನ್ನುವುದು ವದಂತಿ ಅಷ್ಟೇ. ವಿರೋಧದ ಬಗ್ಗೆ ಮಾತನಾಡಿದರೆ ಹೈಕಮಾಂಡ್ ನೋಟಿಸ್ ನೀಡುತ್ತದೆ. ಆಗ ನಾನು ಉತ್ತರ ನೀಡಬೇಕಾಗುತ್ತದೆ ಎಂದರು. ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ. ಅದರಲ್ಲಿ ನಾನು ಭಾಗೀದಾರ.
ಡಿಕೆಶಿ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ. ಎಲ್ಲರೂ ಸೇರಿ ಬೆಳಗಾವಿ ಸಮಾವೇಶ ಯಶಸ್ವಿ ಮಾಡಿದ್ದೇವೆ. ಡಿಕೆಶಿ ನಾನು ಒಗ್ಗಟ್ಟಾಗಿ ಇದ್ದೇವೆ. ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವನ್ನು ದೆಹಲಿಯಲ್ಲಿ ಕೇಳಬೇಕು. ರಾಜ್ಯಾಧ್ಯಕ್ಷ ಬದಲಾವಣೆ ಮಾಡುವಷ್ಟು ನಮ್ಮ ಬಳಿ ಶಕ್ತಿಯಿಲ್ಲ, ಅಧಿಕಾರ ಇಲ್ಲ. ಚರ್ಚೆ ಅನಾವಶ್ಯಕ ಎಂದರು.