ವಿಜಯಸಾಕ್ಷಿ ಸುದ್ದಿ, ರಾಯಚೂರು
ಜಿಲ್ಲೆಯ ಮಸ್ಕಿ ವಿಧಾನಸಭೆಗೆ ನಡೆಯುತ್ತಿರುವ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಶನಿವಾರ ಮಸ್ಕಿ ಕ್ಷೇತ್ರದ ಗುಡಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಶರಣಗೌಡ ಬಯ್ಯಾಪುರ ಇವರ ಸಮ್ಮುಖದಲ್ಲಿ ಕೆಲ ಬಿಜೆಪಿ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಗುಂಡನಗೌಡ ಅಡವಿಬಾವಿ, ಶಿವನಗೌಡ ಪೊಲೀಸ್ ಪಾಟೀಲ್, ಮುತ್ತಣ್ಣ ಚುಕನಟ್ಟಿ ಕಾಂಗ್ರೆಸ್ ಸೇರಿದ ಮುಖಂಡರಾಗಿದ್ದು, ಇವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದ್ದಾರೆ.