ಕೋಲಾರ:- ಏಕಾಏಕಿ ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ ಘಟನೆ ಕೋಲಾರದ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ನಡೆದಿದೆ. ಕೆಜಿಎಫ್ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿದ ಹಿನ್ನೆಲೆ ಈ ಪ್ರತಿಭಟನೆ ಜರುಗಿದೆ.
ನಿತ್ಯ ಉದ್ಯೋಗ, ವಿದ್ಯಾಭ್ಯಾಸ, ಎಂದು ಸಾವಿರಾರು ಜನರು ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಾರೆ. ಇದೀಗ ರೈಲು ಪ್ರಯಾಣಕ್ಕೆ ತೊಂದರೆಯಾಗುವಂತೆ ರೈಲ್ವೆ ಇಲಾಖೆ ಕೋಚ್ಗಳನ್ನು ಕಡಿಮೆ ಮಾಡಿದೆ. ಈ ಹಿನ್ನೆಲೆ ರೈಲ್ವೆ ಇಲಾಖೆ ಕ್ರಮವನ್ನು ಖಂಡಿಸಿ ಬೆಂಗಳೂರು ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ.
ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಮಾರಿಕುಪ್ಪಂನಿಂದ ಬೆಂಗಳೂರಿನ ಸಂಗೋಳ್ಳಿರಾಯಣ್ಣ ನಿಲ್ದಾಣಕ್ಕೆ ತಲುಪುವ ಪ್ಯಾಸೆಂಜರ್ ರೈಲನ್ನು 45 ನಿಮಿಷಗಳ ಕಾಲ ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಕೋಚ್ ಹೆಚ್ವಿಸುವ ಭರವಸೆ ಕೊಟ್ಟ ಬಳಿಕ ಪ್ರತಿಭಟನೆ ಕೈ ಬಿಡಲಾಗಿದೆ.