ಬೆಳಗಾವಿ:- ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ನಾಲ್ವರ ಮೃತ ದೇಹಗಳು ನವದೆಹಲಿಯಿಂದ ವಿಮಾನದ ಮೂಲಕ ಇಂದು ಸಂಜೆ ಬೆಳಗಾವಿಗೆ ಬರಲಿದೆ.
ಪ್ರಯಾಗ್ರಾಜ್ನಿಂದ ಬುಧವಾರ ರಾತ್ರಿಯೇ ಅಂಬುಲೆನ್ಸ್ ಮೂಲಕ ಶವಗಳು ಹೊರಟಿದ್ದು, ಬೆಳಗ್ಗೆ ದೆಹಲಿ ತಲುಪಲಿದೆ. ಮಧ್ಯಾಹ್ನ 3:30ಕ್ಕೆ ದೆಹಲಿಯಿಂದ ಹೊರಟ ವಿಮಾನ ಸಂಜೆ 5:30ಕ್ಕೆ ಬೆಳಗಾವಿಗೆ ಬರಲಿದೆ.
ಒಂದು ಅಂಬುಲೆನ್ಸ್ನಲ್ಲಿ ಜ್ಯೋತಿ ಹತ್ತರವಾಠ (44) ಮತ್ತು ಮಗಳು ಮೇಘಾ ಹತ್ತರವಾಠ(24) ಅವರ ಶವ ಇದ್ದರೆ ಮತ್ತೊಂದು ಅಂಬುಲೆನ್ಸ್ನಲ್ಲಿ ಶೆಟ್ಟಿ ಗಲ್ಲಿಯ ಅರುಣ್ ಕೋಪರ್ಡೆ(61), ಶಿವಾಜಿನಗರದ ಮಹಾದೇವಿ ಬಾವನೂರ(48) ಮೃತದೇಹವಿದೆ. ಬೆಳಗಾವಿ ಡಿಸಿ ಮೊಹಮ್ಮದ್ ಅವರು ಶವ ಸುಗಮವಾಗಿ ನಗರಕ್ಕೆ ಬರಲು ಇಬ್ಬರು ವಿಶೇಷ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿದ್ದಾರೆ.
ಇನ್ನೂ ಪ್ರಯಾಗ್ರಾಜ್ ದುರಂತದಲ್ಲಿ ಸಿಲುಕಿರಬಹುದಾದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅಧಿಕಾರಿಗಳ ತಂಡವನ್ನು ಕುಂಭಮೇಳಕ್ಕೆ ಕಳಿಸಿ ಸಹಾಯವಾಣಿ ಶುರುಮಾಡಿದೆ.