ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಇಂದು ಕಾಲ್ತುಳಿತ ಉಂಟಾಗಿದೆ. ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ, 60 ಭಕ್ತರು ಗಾಯಗೊಂಡಿದ್ದಾರೆ. 25 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಮೃತರಾದವರಲ್ಲಿ ಕರ್ನಾಟಕದ ನಾಲ್ವರು ಭಕ್ತರು ಕೂಡ ಸೇರಿದ್ದರು.
Advertisement
ಇದೀಗ ಪ್ರಯಾಗ್ರಾಜ್ನಿಂದ ಬೆಳಗಾವಿಗೆ ವಾಪಸ್ಸಾಗುತ್ತಿದ್ದ ಮತ್ತೊರ್ವ ವ್ಯಕ್ತಿ ರೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ ದೇಶಪಾಂಡೆ ಗಲ್ಲಿ ನಿವಾಸಿ ರವಿ ಜಟಾರ(61) ಮೃತ ವ್ಯಕ್ತಿಯಾಗಿದ್ದು, ಪ್ರಯಾಗ್ರಾಜ್ದಿಂದ ಬೆಳಗಾವಿಗೆ ರೈಲಿನಲ್ಲಿ ಬರುವಾಗ ಪುಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.