ಬೆಳಗಾವಿ: ಪ್ರಯಾಗರಾಜ್ ಯಾತ್ರೆಗೆ ತೆರಳಿದ ಮತ್ತೋರ್ವ ವ್ಯಕ್ತಿ ಸಾವು.!

0
Spread the love

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಇಂದು ಕಾಲ್ತುಳಿತ ಉಂಟಾಗಿದೆ. ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ, 60 ಭಕ್ತರು ಗಾಯಗೊಂಡಿದ್ದಾರೆ. 25 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಮೃತರಾದವರಲ್ಲಿ ಕರ್ನಾಟಕದ ನಾಲ್ವರು ಭಕ್ತರು ಕೂಡ ಸೇರಿದ್ದರು.

Advertisement

ಇದೀಗ ಪ್ರಯಾಗ್‌ರಾಜ್​ನಿಂದ ಬೆಳಗಾವಿಗೆ ವಾಪಸ್ಸಾಗುತ್ತಿದ್ದ ಮತ್ತೊರ್ವ ವ್ಯಕ್ತಿ ರೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ ದೇಶಪಾಂಡೆ ಗಲ್ಲಿ ನಿವಾಸಿ  ರವಿ ಜಟಾರ(61) ಮೃತ ವ್ಯಕ್ತಿಯಾಗಿದ್ದು, ಪ್ರಯಾಗ್​ರಾಜ್​ದಿಂದ ಬೆಳಗಾವಿಗೆ ರೈಲಿನಲ್ಲಿ ಬರುವಾಗ ಪುಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here