ವಿಜಯಸಾಕ್ಷಿ ಸುದ್ದಿ, ಗದಗ
ಎಲೆಕ್ರ್ಟೇಶಿಯನ್, ಅಟೋ ಡ್ರೈವರ್, ಖಾಸಗಿ ಕಂಪನಿಯ ಇಬ್ಬರು ನೌಕರರು ಸೇರಿದಂತೆ ಐದು ಜನರು ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಬೆಟಗೇರಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಬೆಟಗೇರಿಯ ಕುರಹಟ್ಟಿಪೇಟಿಯ ರೈಲ್ವೆ ಹಳಿಯ ಹತ್ತಿರ ಜೂಜಾಟದಲ್ಲಿ ತೊಡಗಿದ್ದ ಶ್ರೀಧರ್ ಅಲಿಯಾಸ್ ಮಂಜುನಾಥ್ ನಾಗಪ್ಪ ಮೆಣಸಗಿ, ವಿರೇಶ್ ಮರಿಯಪ್ಪ ಸೊಲಗಿ, ಕೃಷ್ಣಪ್ಪ ರಾಮಪ್ಪ ಚಲವಾದಿ, ಕಿರಣಕುಮಾರ್ ಈರಣ್ಣ ಗಂಜಿ, ಮನೋಹರ ಯಲ್ಲಪ್ಪ ಪಾಂಚಾಳ ಎಂಬುವವರನ್ನು ಬೆಟಗೇರಿ ಠಾಣೆಯ ಪಿಎಸ್ಐ ರಾಜೇಶ್ ಬಟಗುರ್ಕಿ ಹಾಗೂ ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದಾರೆ.

ಬಂಧಿತರಿಂದ ನಗದು 12 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬೆಟಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



