ನವದೆಹಲಿ:- ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಕನಸು ಕಾಣುತ್ತಿದ್ದ ಎಎಪಿ ನಾಯಕರಿಗೆ ದೆಹಲಿಯಲ್ಲಿ ಭಾರೀ ಮುಖಭಂಗವಾಗಿದೆ. ದೆಹಲಿ ವಿಧಾನಸಭಾ 2025ರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿಗೆ ಹಿನ್ನೆಡೆಯಾಗಿದೆ.
Advertisement
ದೆಹಲಿ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.
ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.