ಸಿಲಿಂಡರ್ ಸ್ಪೋಟ: ಮನೆ ಛಾವಣಿಯೇ ಚಿಂದಿ, ಓರ್ವ ಗಂಭೀರ!

0
Spread the love

ಬೆಂಗಳೂರು:- ಮನೆಯ ಸಿಲಿಂಡರ್ ಬ್ಲಾಸ್ಟ್ ಆದ ಪರಿಣಾಮ ಮನೆ ಛಾವಣಿ ಚಿಂದಿ ಆಗಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ನಡೆದಿದೆ.

Advertisement

ಘಟನೆಯಿಂದ ಮುನಿರಾಜು ಬಡಾವಣೆಯ ನಿವಾಸಿ ಆಗಿರುವ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿವೆ. ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆ ಛಾವಣಿಯೇ ಚಿಂದಿ ಚಿಂದಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.


Spread the love

LEAVE A REPLY

Please enter your comment!
Please enter your name here