ಹಿರಿಯ ರಾಜ್ಯ ಉಪಾಧ್ಯಕ್ಷರಾಗಿ ರವಿ ಗುಂಜೀಕರ ನೇಮಕ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ ನಿಯಮದ ಪ್ರಕಾರ ನೌಕರ ಸಂಘದ ರಾಜ್ಯಾಧ್ಯಕ್ಷ  ಸಿ. ಎಸ್. ಷಡಕ್ಷರಿ ಅವರು ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ಗದಗ ಜಿಲ್ಲೆಯ ನೌಕರ ಸಂಘದ ಜಿಲ್ಲಾಧ್ಯಕ್ಷ ರಾದ ರವಿ ಗುಂಜೀಕರ ಅವರನ್ನು ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

Advertisement

ಪ್ರಪ್ರಥಮ ಬಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರದ ಪ್ರಮುಖ ಹುದ್ದೆಯನ್ನು ಅಲಂಕರಿಸಿರುವುದು ಇಲಾಖೆ ನೌಕರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾ ಸಂಘದ ಕಾರ್ಯದರ್ಶಿ ಡಾ|| ಬಸವರಾಜ ಬಳ್ಳಾರಿ, ರೋಣ ತಾಲೂಕಾ ಕಲ್ಯಾಣಾಧಿಕಾರಿಗಳಾದ ಎಂ. ಎಂ. ಹಣಸಿ ಹಾಗೂ ಸರ್ಕಾರಿ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಸಮಸ್ತ ನೌಕರರ ಬಳಗ, ಶಿಕ್ಷಕರ ಬಳಗ ಅಭಿನಂದನೆ ಸಲ್ಲಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here