ವಿಜಯಪುರ:- ಇಲ್ಲಿನ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ನಟೋರಿಯಸ್ ಹಂತಕ ಬಾಗಪ್ಪನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಡಲಿಯಿಂದ ಬಾಗಪ್ಪನ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದು, ಗುಂಡಿನ ಸದ್ದು ಕೂಡ ಸ್ಥಳೀಯರಿಗೆ ಕೇಳಿಸಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಮದೀನಾ ನಗರದಲ್ಲಿ ಬಾಡಿಗೆಗೆ ಬಾಗಪ್ಪ ವಾಸವಿದ್ದ. ರಾತ್ರಿ 9:30 ರ ಸುಮಾರಿಗೆ ಆಟೋದಲ್ಲಿ ನಾಲ್ಕೈದು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.
ಊಟ ಮಾಡಿ ಮನೆ ಎದುರು ಬಾಗಪ್ಪ ವಾಕಿಂಗ್ ಮಾಡ್ತಿದ್ದ ವೇಳೆ ಹತ್ಯೆಯಾಗಿದೆ. ಊಟ ಮಾಡಿಕೊಂಡು ಮನೆ ಎದುರು ಅಡ್ಡಾಡುತ್ತಿದ್ದ ವೇಳೆ ಮಾರಕಾಸ್ತ್ರ ಹಾಗೂ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಎಷ್ಟು ಜನರು ಬಂದಿದ್ದರು ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಮನೆಯವರು ನೀಡಿದ ಮಾಹಿತಿ ಆಧರಿಸಿ ಹೇಳ್ತಿದ್ದೇನೆ. ಕರೆಂಟ್ ಕಟ್ ಮಾಡಿ ಹತ್ಯೆ ಮಾಡಿದ್ದ ಬಗ್ಗೆ ಮಾಹಿತಿ ಇಲ್ಲ. ಸಂಬಂಧಿಕರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.