ಮಂಡ್ಯ:- ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಮಂಡ್ಯದ K.R. ಪೇಟೆ ತಾಲ್ಲೂಕು ಕುಂದನಹಳ್ಳಿ ಗೇಟ್ ಬಳಿ ಜರುಗಿದೆ.
ಬಸ್ ನಲ್ಲಿ 25 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ, ಅದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಮಕ್ಕಳ ಕೈ ಕಾಲು ಮುರಿತವಾಗಿರುವ ಮಾಹಿತಿ ಲಭ್ಯವಾಗಿದೆ. ಅಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
K.R.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



