ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಓಡಾಡುತ್ತಿದ್ದ ಲಕ್ಷಾಂತರ ಜನರಿಗೆ, ಮೆಟ್ರೋ ದರ ಏರಿಕೆಯಿಂದ ಶಾಕ್ ಕೊಟ್ಟಂತಾಗಿದೆ. ಅದಲ್ಲದೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ನಮ್ಮ ಮೆಟ್ರೋ ದರೆ ಏರಿಕೆ ಸಂಬಂಧಪಟ್ಟಂತೆ ಬಿಎಮ್ಆರ್ಸಿಎಲ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ ಬೆನ್ನಲ್ಲೇ ಸಂಸ್ಥೆಯ ಎಂಡಿ ಮಹೇಶ್ವರ್ ರಾವ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಮರ್ಜ್ ಮಾಡಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ ಎಂದು ಮಹೇಶ್ವರ್ ರಾವ್ ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು.
ಮೆಟ್ರೋ ದರ ಶೇ 45 ರಿಂದ ಶೇ 50 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ ಎಂದು ಅವರು ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣ ದರವನ್ನು ಸ್ಟೇಜ್ ಆಧಾರದಲ್ಲಿ ಮರ್ಜ್ ಮಾಡುವ ಮೂಲಕ ಇಳಿಕೆ ಮಾಡಿ ಶೀಘ್ರದಲ್ಲೇ ವಿವರಗಳನ್ನು ಒದಗಿಸುತ್ತೇವೆ ಎಂದು ಅವರು ತಿಳಿಸಿದರು.