HomeCrime Newsಎಂಎಲ್ಎ ಪುತ್ರ ಎಂದು ಹೇಳಿಕೊಂಡು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಖದೀಮನ ಸೆರೆ

ಎಂಎಲ್ಎ ಪುತ್ರ ಎಂದು ಹೇಳಿಕೊಂಡು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಖದೀಮನ ಸೆರೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಎಂಎಲ್ಎ ಮಗ ಎಂದು ನಂಬಿಸಿ ಯುವತಿಯನ್ನು ಮರಳು ಮಾಡಿ, ಅವಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನನ್ನು ಬಂಧಿಸಲಾಗಿದೆ. ಯುವತಿಯೊಂದಿಗಿನ ಖಾಸಗಿ ಕ್ಷಣಗಳ ವಿಡಿಯೋ ಪಾಲಕರ ಮೊಬೈಲ್ಗೆ ಹಾಕಿ, ಹಣ ಕೀಳಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧನೂರು ಮೂಲದ ಯುವತಿ ತಾವರಗೇರಾ ಅಜ್ಜಿ ಮನೆಯಲ್ಲಿದ್ದಳು. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಬಾಗೋಡಿಯ ಯುವಕನೊಂದಿಗೆ ಟಿಕ್ಟಾಕ್ ಮೂಲಕ ಪರಿಚಯವಾಗಿದ್ದಳು. ಈತ ಶಾಸಕ ಅಭಯ ಪಾಟೀಲ ಅವರ ಮಗ, ಚಂದು ಪಾಟೀಲ್ ಎಂದು ಹೇಳಿಕೊಂಡು ಮದುವೆಯಾಗುವಂತೆ ಪೀಡಿಸಿದ್ದಾನೆ.

ಯುವಕನ ಮಾತಿಗೆ ಮರುಳಾಗಿ ಕಳೆದ ಮಾರ್ಚ್ ನಲ್ಲಿ ಗೋವಾದಲ್ಲಿ ಬೀಚ್ ಸುತ್ತಾಡಿದ್ದು, ಆಕೆಯನ್ನು ಲೈಂಗಿಕವಾಗಿ ಸಹ ಬಳಸಿಕೊಂಡಿದ್ದಾನೆ. ಈ ಎಲ್ಲವನ್ನು ಫೋಟೋ, ವಿಡಿಯೋ ಮಾಡಿಕೊಂಡಿದ್ದ ಯುವಕ, ಯುವತಿಯ ಪಾಲಕರಿಗೆ ಕಳುಹಿಸಿ 9 ಲಕ್ಷ ರೂ. ಬೇಡಿಕೆ ಇಟ್ಟಿದ್ದಾನೆ.
ಈ ಹಿನ್ನೆಲೆಯಲ್ಲಿ ಯುವತಿ ಪಾಲಕರ ತಾವರಗೇರಾ ಪೊಲೀಸ್ ಠಾಣೆಗೆ ನೀಡಿದ ದೂರಿನ‌ ಮೇರೆಗೆ ಆರೋಪಿ ಮಹ್ಮದ್ ಚಾಂದ್ ಪಾಷಾ ಅಲಿಯಾಸ್ ಚಂದು ಪಾಟೀಲ ನನ್ನು ವಶಕ್ಕೆ ತೆಗೆದುಕೊಂಡು ಕುಷ್ಟಗಿಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಕುಷ್ಟಗಿ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ತಿಳಿಸಿದ್ದಾರೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!