ಮುಖ್ಯಮಂತ್ರಿ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸುತ್ತಿದ್ದವ ಅರೆಸ್ಟ್!

0
Spread the love

ಬೆಂಗಳೂರು:- ವಿಧಾನಸೌಧ ಠಾಣೆ ಪೊಲೀಸರು ತನಿಖೆ ಕೈಗೊಂಡು ಮುಖ್ಯಮಂತ್ರಿ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದೆ. ಆರೋಪಿ ರಾಘವೇಂದ್ರ, ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಮುಖ್ಯಮತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಅರೆಸ್ಟ್ ಮಾಡಿದ್ದಾರೆ.

ಆರೋಪಿ ರಾಘವೇಂದ್ರ ಈ ಹಿಂದೆ ಹಲವು ಶಾಸಕರ ಬಳಿ ಪಿಎ ಆಗಿ ಕೆಲಸ ಮಾಡಿದ್ದನು ಎಂದು ತಿಳಿದುಬಂದಿದೆ. ಆರೋಪಿ ರಾಘ್ರವೇಂದ್ರ ವಿರುದ್ಧ ಪೋಸ್ಟಿಂಗ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಆರೋಪವೂ ಕೇಳಿಬಂದಿದೆ. ಇದೀಗ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here