ನವದೆಹಲಿ:- ಇಂದು ಮುಂಜಾನೆ 5:36ರ ವೇಳೆಗೆ ಪ್ರಬಲ ಭೂಕಂಪ ಸಂಭವಿಸಿದ ಘಟನೆ ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಜರುಗಿದೆ.
ಘಟನೆಯಿಂದ ರಾಷ್ಟ್ರ ರಾಜಧಾನಿ ಮಂದಿ ಬೆಚ್ಚಿ ಬಿದ್ದಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದಿಂದ ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್ನಲ್ಲಿರುವ ಹಲವಾರು ಬಹುಮಹಡಿ ಕಟ್ಟಡಗಳ ನಿವಾಸಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ. ಗಾಜಿಯಾಬಾದ್ನ ನಿವಾಸಿಯೊಬ್ಬರು ಈ ರೀತಿಯ ಅನುಭವವನ್ನು ನನ್ನ ಜೀವಮಾನದಲ್ಲಿ ಅನುಭವಿಸಿರಲಿಲ್ಲ ಎಂದು ಆತಂಕದಿಂದ ನುಡಿದಿದ್ದಾರೆ.
ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ರೈಲು ಅಪಘಾತಕ್ಕೀಡಾಗಿದಂತೆ ಅಥವಾ ಸೇತುವೆ ಕುಸಿದಂತೆ ಭಾಸವಾಯಿತು. ಹಲವು ಪ್ರಯಾಣಿಕರು ನಿಲ್ದಾಣದಲ್ಲಿರುವ ರೂಮ್ ಒಂದರಲ್ಲಿದ್ದರು ಈ ವೇಳೆ, ಎಲ್ಲರೂ ಅಲ್ಲಿಂದ ಹೊರಗೆ ಓಡಿದರು ಎಂದಿದ್ದಾರೆ.