ನನಗೂ ಡಿ.ಕೆ.ಶಿವಕುಮಾರ್ ಅವರಿಗೂ ವೈಯುಕ್ತಿಕವಾಗಿ ಏನೂ ಇಲ್ಲ: ಕೆ.ಎನ್ ರಾಜಣ್ಣ

0
Spread the love

ಬೆಂಗಳೂರು: ನನಗೂ ಡಿ.ಕೆ.ಶಿವಕುಮಾರ್ ಅವರಿಗೂ ವೈಯುಕ್ತಿಕವಾಗಿ ಏನೂ ಇಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೂ ಡಿ.ಕೆ.ಶಿವಕುಮಾರ್ ಅವರಿಗೂ ವೈಯುಕ್ತಿಕವಾಗಿ ಏನೂ ಇಲ್ಲ. ವಿಚಾರ ಭಿನ್ನ ಇರಬಹುದು ಅಷ್ಟೇ,

Advertisement

ವಿಧಾನಸೌಧಕ್ಕೆ ನಾನು ಒಂದು ರಸ್ತೆಯಲ್ಲಿ ಹೋಗೋಣ ಅಂದರೆ ಅವರು ಒಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು. ಒಟ್ಟಿಗೆ ವಿದೇಶ ಪ್ರವಾಸ ಮಾಡಿದ್ದೇವೆ. ಅವರನ್ನು ಮನೆಗೆ ಒಂದು ದಿನ ಊಟಕ್ಕೆ ಕರೆಯುತ್ತೇನೆ ಎಂದಿದ್ದಾರೆ.

ಇನ್ನೂ ಪಕ್ಷದ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಎಚ್ಚರಿಕೆ ವಿಚಾರವಾಗಿ, ನಮಗೆ ಎಚ್ಚರಿಕೆ ನೀಡಲು ಜಿ.ಸಿ.ಚಂದ್ರಶೇಖರ್ ಯಾರು? ಕೆಪಿಸಿಸಿ ಕಾರ್ಯಾಧ್ಯಕ್ಷರಾದರೆ ಅವರಿಗೇನು ಎರಡು ಕೊಂಬು ಇದೆಯಾ? ಶಿಶುಪಾಲ ಕೃಷ್ಣ ಪುರಾಣ ಇದೆಲ್ಲಾ ನಾನು ನಂಬಲ್ಲ. ಪುರಾಣ ಎಲ್ಲಾ ಕಟ್ಟು ಕಥೆ ಅವರೇ ಶಿಶುಪಾಲ. ಇಂತವರು ಪಕ್ಷಕ್ಕೆ ಹೊರೆ, ಅವರ ಹಿನ್ನಲೆ ಏನು ಎಂದು ಪ್ರಶ್ನಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here