ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣ: ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಗೆ ಜಾಮೀನು ಮಂಜೂರು!

0
Spread the love

ಮೈಸೂರು:- ಮೈಸೂರು ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್‌ ಗೆ ಸಂಬಧಪಟ್ಟಂತೆ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ.

Advertisement

ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.

ಘಟನೆ ಹಿನ್ನೆಲೆ:

ಫೆಬ್ರವರಿ 10ರಂದು ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು. ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸತೀಶ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದರು.


Spread the love

LEAVE A REPLY

Please enter your comment!
Please enter your name here