ಸತತ ಪ್ರಯತ್ನ ವಿದ್ಯಾರ್ಥಿ ಜೀವನದ ಸೂತ್ರವಾಗಲಿ

0
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಆಸಕ್ತಿ, ಸಮಯಪಾಲನೆ ಮತ್ತು ನಿರಂತರತೆ ಹೊಂದಿದ್ದರೆ ತಮ್ಮ ಗುರಿಯನ್ನು ನಿರಾಂತಕವಾಗಿ ಮುಟ್ಟಬಹುದು. ಪರೀಕ್ಷೆಯ ಭಯ ಬಿಟ್ಟು ತಾಳ್ಮೆಯಿಂದ ಪ್ರಶ್ನೆಗಳಿಗೆ ಉತ್ತರಿಸಿ. ಶಿಸ್ತು, ಕಷ್ಟ ಹಿಷ್ಣುತೆ ಮತ್ತು ಸತತ ಪ್ರಯತ್ನ ವಿದ್ಯಾರ್ಥಿ ಜೀವನದ ಸೂತ್ರಗಳು ಎಂದು ಸಾಹಿತಿ, ನಿವೃತ್ತ ಶಿಕ್ಷಕ ಎಮ್.ಎಸ್. ಧಡೇಸೂರಮಠ ಹೇಳಿದರು.

Advertisement

ಸಮೀಪದ ಜಕ್ಕಲಿ ಗ್ರಾಮದ ಶ್ರೀ ಅಂದಾನಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾ ಸರಸ್ವತಿ ಪೂಜೆ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಬಿ.ಆರ್. ಗದುಗಿನ ಮಾತನಾಡಿ, ವಿದ್ಯಾರ್ಥಿಗಳು ಹೆತ್ತ ತಂದೆ-ತಾಯಿ, ಕಲಿತ ಶಾಲೆ, ಕಲಿಸಿದ ಗುರು ಮತ್ತು ಹೊತ್ತ ಭೂಮಿಯ ಋಣ ತೀರಿಸಬೇಕಾದರೆ ಸಮಾಜ ಮೆಚ್ಚುವ ರೀತಿಯಲ್ಲಿ ಉತ್ತಮ ಪ್ರಜೆಗಳಾಗಬೇಕು. ಹಾಗಾಗಬೇಕಾದರೆ ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಹೇಳಿದರು.

ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಗಂಗಮ್ಮ ಜಂಗಣ್ಣವರ, ಉಪಾಧ್ಯಕ್ಷೆ ಯಲ್ಲವ್ವ ಮಾದರ, ಎಸ್‌ಡಿಎಮ್‌ಸಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕರಾದ ಆರ್.ಡಿ. ಬಡಿಗೇರ, ಪರಶುರಾಮ ಹರಿಜನ, ಕಮಲಮ್ಮ ಜೋಗಿನ, ಶಾಲಾ ಸಿಬ್ಬಂದಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕ ಚಂದ್ರಶೇಖರ ಅಂಬಿಗೇರ, ಶಿಕ್ಷಕಿ ಡಿ.ಎಸ್. ಆಲಮೇಲ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಕಿ ಗೌರಮ್ಮ ಸ್ವಾಗತಿಸಿದರು. ಶಿಕ್ಷಕಿ ಯು.ಎಸ್. ಕಣವಿ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕಿ ದೀಪಾ ತುಕ್ಕೋಜಿ ಸನ್ಮಾನ ನಿರ್ವಹಿಸಿದರು. ಶಿಕ್ಷಕಿ ಸುನಿತಾ ಪಾಟೀಲ್ ಪ್ರಶಸ್ತಿ ವಿತರಣೆ ನೆರವೇರಿಸಿದರು. ಶಿಕ್ಷಕ ವ್ಹಿ.ವ್ಹಿ. ಅಣ್ಣಿಗೇರಿ ನಿರೂಪಿಸಿದರು. ನೆಹರು ಮನೋಳಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here