ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ. ಅದರ ಬಗ್ಗೆ ಚರ್ಚೆಯಾಗಬಾರದು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ.
Advertisement
ಕೆಲವರಿಗೆ ಆಸೆ ಆಕಾಂಕ್ಷೆಗಳು ಇರುತ್ತದೆ. 30 ಜನ ಸಚಿವರಾಗಬಹುದು. ಸಿಎಂ ಮಾತ್ರ ಒಬ್ಬರೇ. ಅದನ್ನ ನಾವು ಅಷ್ಟು ಸುಲಭವಾಗಿ ಆಗುತ್ತದೆ ಎಂದು ಹೇಳಲು ಆಗದು. ಎಲ್ಲರೂ ಕೂಡಿ ಒಮ್ಮತವಾಗಿ ಆಯ್ಕೆ ಮಾಡುವ ನಿರ್ಣಯ. ಈಗ ಒಬ್ಬರು ಸಿಎಂ ಇದ್ದಾರೆ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ವಿಷಯ ಎಂದರು.