ವಿಜಯಸಾಕ್ಷಿ ಸುದ್ದಿ, ಗದಗ
Advertisement
ಗದಗನಲ್ಲಿ ವೀಕೆಂಡ್ ಲಾಕ್ ಡೌನ್ ಗೆ ವಿಕಲಚೇತನ ಯುವತಿಯೊಬ್ಬಳು ಊರಿಗೆ ತೆರಳಲು ಪರದಾಡಿದ ಘಟನೆ ನಡೆದಿದೆ. ಗದಗನ ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಮುಂಜಾನೆಯಿಂದ ತಮ್ಮೂರಿಗೆ ಹೋಗಲು ಪರದಾಟ ನಡೆಸಿದಳು.
ರೈಲು ಮೂಲಕ ಬೆಂಗಳೂರಿನಿಂದ ಗದಗ ನಗರಕ್ಕೆ ಆಗಮಿಸಿದ ಯುವತಿ, ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಶೆಲವಡಿ ಗ್ರಾಮಕ್ಕೆ ತೆರಳಬೇಕಿತ್ತು. ವೀಕೆಂಡ್ ಕರ್ಫ್ಯೂ ಜಾರಿ ಇರುವದಿಂದ ಗದಗ ಬಸ್ ನಿಲ್ದಾಣ ಖಾಲಿ ಖಾಲಿ ಇದೆ. ಕೆಲವು ಮಾರ್ಗಕ್ಕೆ ಹೋಗುವ ಬಸ್ ಗಳ ಮಾತ್ರ ಆರಂಭವಾಗಿವೆ.
ಪ್ರಯಾಣಿಕರ ಕೊರತೆಯಿಂದ ಬೀಕೋ ಎನ್ನುತ್ತಿರುವ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರವೂ ಸ್ಥಗಿತವಾಗಿದೆ. ಹೀಗಾಗಿ ಯುವತಿಗಾಗಿ ಬಸ್ ಓಡಿಸಿದರೆ ನಷ್ಟ ಅನುಭವಿಸಬೇಕಾಗುತ್ತೆ ಅಂತ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದರು.