ಮಾಸ್ಕ್ ಹಾಕು‌ ಅಂದಿದ್ದಕ್ಕೆ ಅಧಿಕಾರಿಗಳಿಗೆ ಅವಾಜ್ ಹಾಕಿದ್ನಾ ಯುವಕ..!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಮಾಸ್ಕ್ ಹಾಕದೇ ರಸ್ತೆಗಿಳಿದಿದ್ದ ಬೈಕ್ ಸವಾರನೋರ್ವನಿಗೆ ಅಧಿಕಾರಿಗಳು ಮಾಸ್ಕ್ ಹಾಕಿಕೋ ಎಂದಿದ್ದಕ್ಕೆ ಯುವಕ ಅವಾಜ್ ಹಾಕಿದ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿನ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ನಗರ ಸಭೆ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬಂದ ಯುವಕನಿಗೆ ಅಧಿಕಾರಿಗಳು ಮಾಸ್ಕ್ ಹಾಕದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲ ದಂಡ ಕಟ್ಟುವಂತೆ ಹೇಳಿದ್ದಾರೆ. ಆದರೆ ಅಧಿಕಾರಿಗಳು ಯುವಕನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳ ಮೇಲೆ ಪುಲ್ ಗರಂ ಆಗಿದ್ದಾನೆ. ಅಧಿಕಾರಿಗಳು ಹಾಗೂ ಯುವಕನ ಮಧ್ಯ ವಾಗ್ವಾದ ನಡೆಯುತ್ತಿದ್ದಾಗ ಟ್ರಾಫಿಕ್ ಪೊಲೀಸರು ಮಧ್ಯ ಪ್ರವೇಶಿಸಿ ಯುವಕನಿಗೆ ಬುದ್ದಿ ಹೇಳಿ ಕಳಿಸಿ ಘಟನೆಗೆ ಸುಖಾಂತ್ಯ ಹಾಡಿದರು.


Spread the love

LEAVE A REPLY

Please enter your comment!
Please enter your name here