HomeGadag Newsರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ

ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಗದುಗಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ. ಗೃಹಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಪ್ರತಿ ತಿಂಗಳು ಕೊಟ್ಟಿಲ್ಲ ಅಂದರೆ ಹೆಣ್ಣು ಮಕ್ಕಳಿಗೆ ಗೌರವ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಹಣಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಮುಖ್ಯಮಂತ್ರಿಗಳು ಭಂಡತನದಿಂದ ಒಪ್ಪಿಕೊಳ್ಳುತ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೆ ಅಲ್ಲ, ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದೂ ಇಲ್ಲ. ಕುಡಿಯುವ ನೀರಿನ ಯೋಜನೆಗೆ ಹಣ ಕೊಡದೇ ಕುಂಠಿತವಾಗಿದೆ. ರಾಜ್ಯ ಸರ್ಕಾರ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಜನ ಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ತೆರಿಗೆ ಪಡೆದು ಅದನ್ನೇ ಗ್ಯಾರಂಟಿ ರೂಪದಲ್ಲಿ ಮರಳಿ ಕೊಡುಲು ಮುಂದಾಗಿದೆ. ಆದರೆ, ಅದರಲ್ಲೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ಇವರಿಗೆ ಅಭಿವೃದ್ಧಿ ಮಾಡಲು ಮನಸ್ಸಿಲ್ಲ. ಹೀಗಾಗಿ ಕಾಂಗ್ರೆಸ್ ವೈಫಲ್ಯ ಮುಚ್ಚಿಹಾಕಲು ಉದಯಗಿರಿ ಗಲಾಟೆ, ಆತಂಕಕಾರಿ ಗಲಭೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಜಾಬ್ ವಿಷಯವಾಗಿ ಹೈಕೋರ್ಟ್ ಆದೇಶ ಕೊಟ್ಟಿದೆ. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ. 1980ರ ಶಿಕ್ಷಣ ನೀತಿಯ ಪ್ರಕಾರ ಸಮವಸ್ತç ಒಪ್ಪಿಕೊಳ್ಳಲಾಗಿದೆ. ಹಿಜಾಬ್, ಮತ್ತೊಂದು ತರುವ ಯೋಚನೆ ಮಾಡಲಾಗುತ್ತಿದೆ. ಕೆಲವು ಸಂಘಟನೆಗಳು ಹಿಜಾಬ್ ತರಲು ಮುಂದಾಗಿದ್ದು, ಸರ್ಕಾರದ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯ ಉಳಿಸಿ ಹೋರಾಟ ತೀವ್ರಗೊಂಡಿದೆ. ಹಳೆಯ ವಿಶ್ವವಿದ್ಯಾಲಯಗಳು ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡುತ್ತಾರೆ. ಆದರೆ ಅಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಸಂಶೋಧನೆ ಆಗುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ. ಅವು ಭ್ರಷ್ಟಾಚಾರದ ಕೂಪಗಳಾಗಿವೆ. ಅದನ್ನು ಸರಿಪಡಿಸುವುದನ್ನು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅತೀ ಕಡಿಮೆ ವೆಚ್ಚದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ವಿಶೇಷವಾಗಿ ಎಸ್‌ಸಿ-ಎಸ್‌ಟಿ, ಒಬಿಸಿ ಹೆಣ್ಣುಮಕ್ಕಳು ದೊಡ್ಡಮಟ್ಟದಲ್ಲಿ ವಿವಿಯಲ್ಲಿ ನೋಂದಾಯಿತರು. ಇವರ ಭವಿಷ್ಯಕ್ಕೆ ದೊಡ್ಡಮಟ್ಟದ ಕೊಡಲಿ ಪೆಟ್ಟು ಕೊಟ್ಟಿದ್ದಾರೆ. ಹೊಸ ವಿಶ್ವವಿದ್ಯಾಲಯ ಮುಚ್ಚಲು ಬಿಡುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!