HomeIndia Newsಮದ್ಯ ನೀತಿ ಹಗರಣ: ದೆಹಲಿ ವಿಧಾನಸಭೆಯಲ್ಲಿ ಗದ್ದಲ ಮಾಡಿದ್ದ15 ಎಎಪಿ ಶಾಸಕರು ಸಸ್ಪೆಂಡ್!

ಮದ್ಯ ನೀತಿ ಹಗರಣ: ದೆಹಲಿ ವಿಧಾನಸಭೆಯಲ್ಲಿ ಗದ್ದಲ ಮಾಡಿದ್ದ15 ಎಎಪಿ ಶಾಸಕರು ಸಸ್ಪೆಂಡ್!

For Dai;y Updates Join Our whatsapp Group

Spread the love

ನವದೆಹಲಿ:- ದೆಹಲಿ ವಿಧಾನಸಭೆಯಲ್ಲಿ ಗದ್ದಲ ನಡೆಸಿದ್ದ 15 ಎಎಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಫೆ.5 ರ ಚುನಾವಣೆಯಲ್ಲಿ ಸೋಲನ್ನು ತಪ್ಪಿಸಿಕೊಂಡ ಕೆಲವೇ ಕೆಲವು ಉನ್ನತ ವ್ಯಕ್ತಿಗಳಲ್ಲಿ ಒಬ್ಬರಾದ ಹಿರಿಯ ಎಎಪಿ ನಾಯಕ ಗೋಪಾಲ್ ರೈ ಅವರನ್ನು ಸಹ ವಿಧಾನಸಭೆಯಿಂದ ಅಮಾನತು ಮಾಡಲಾಯಿತು.

ಹೌದು, ಮದ್ಯ ನೀತಿ ಹಗರಣದ ಕುರಿತು ಲೆಕ್ಕಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಜೊತೆಗೆ ಗದ್ದಲದ ವೇಳೆ ಮಾಜಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ 15 ಮಂದಿ ಎಎಪಿ ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಮಂಗಳವಾರ ಅಮಾನತುಗೊಳಿಸಲಾಗಿದೆ.

ಘಟನೆ ಹಿನ್ನೆಲೆ:-

ವಿಧಾನಸಭೆಯನ್ನುದ್ದೇಶಿಸಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆರಂಭಿಕ ಭಾಷಣದ ವೇಳೆ ಗದ್ದಲ ಪ್ರಾರಂಭವಾಯಿತು. ನೂತನ ಸಿಎಂ ರೇಖಾ ಗುಪ್ತಾ ಅವರ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್‌ಸಿಂಗ್ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಎಎಪಿ ಶಾಸಕರು ‘ಜೈ ಭೀಮ್’ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್‌ ಮತ್ತು ಭಗತ್‌ಸಿಂಗ್ ಅವರ ಛಾಯಾಚಿತ್ರಗಳನ್ನು ಹಿಡಿದು ಪ್ರತಿಭಟಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!