ಹುಬ್ಬಳ್ಳಿ: ಪೊಲೀಸ್ ಇಲಾಖೆಯಿಂದ ಕಂದಾಯ ಇಲಾಖೆವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಪೊಲೀಸ್ ಇಲಾಖೆಯಿಂದ ಕಂದಾಯ ಇಲಾಖೆವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ.
ಆರ್ಟಿಒ ವರ್ಗಾವಣೆಯಲ್ಲಿಯೂ ವ್ಯಾಪಕ ಭ್ರಷ್ಟಾಚಾರವಾಗಿದೆ. ಭ್ರಷ್ಟಾಚಾರದಿಂದ ಇವರ ಬಳಿ ಹಣವಿಲ್ಲ. ಆಡಳಿತ ನಡೆಸಲೂ ಆಗ್ತಿಲ್ಲ. ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ. ದೊಡ್ಡ ಪ್ರಮಾಣದ ವಿದ್ಯುತ್ ಕಡಿತವಾಗಿದೆ. ಗ್ಯಾರಂಟಿ ಯಾರಿಗೂ ಸಿಗದಂತೆ ಮಾಡ್ತಿದೆ ಎಂದು ಆರೋಪಿಸಿದ್ದಾರೆ.
ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ನೆಪದಲ್ಲಿ ಎರಡೂ ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಳಿಸಿರುವುದು ಸರಿಯಲ್ಲ. ಎರಡೂ ಕಡೆಯ ಸಂಘಟನೆಗಳು ಇದನ್ನು ಅರ್ಥಮಾಡಿಕೊಳ್ಳಬೇಕು. ಕಂಡಕ್ಟರ್ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಆಗಬೇಕು. ಇದಕ್ಕೆ ನಮ್ಮ ಸರ್ಕಾರದ ಬೆಂಬಲ ಇದೆ. ಆದ್ರೆ ಅದೇ ಕಾರಣಕ್ಕೆ ಬಸ್ ನಿಲ್ಲಸೋದು ಸರಿಯಲ್ಲ ಎಂದರು.