ತಂದೆ-ತಾಯಿ, ಗುರುವನ್ನು ಮರೆಯದಿರಿ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಹೆತ್ತು ಹೊತ್ತು, ಸಾಕಿ ಸಲುಹಿದ ತಂದೆ-ತಾಯಿಗಳನ್ನು ಹಾಗೂ ವಿದ್ಯೆ ಕಲಿಸಿದ ಗುರುಗಳನ್ನು, ಕಲಿತ ಶಾಲೆಯನ್ನು ಎಂದೂ ಮರೆಯದಿರಿ ಎಂದು ಶಿವಾನಂದ ದಳವೆ ಹೇಳಿದರು.

Advertisement

ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ-1ರಲ್ಲಿ ಮಹಾ ಸರಸ್ವತಿ ಪೂಜೆ ಸಮಾರಂಭ, 7ನೇ ತರಗತಿ ಮಕ್ಕಳ ಬಿಳ್ಕೊಡುಗೆ ಸಮಾರಂಭ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿಗೆ ಕಾಣುವ ನಿಜವಾದ ದೇವರು ತಂದೆ-ತಾಯಿ ಹಾಗೂ ಕಲಿಸಿದ ಗುರುಗಳು. ಪ್ರತಿ ಮಗುವಿನ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುತ್ತಾರೆ. ಅಂತಹ ಮಹನೀಯರನ್ನು ಎಂದೆಂದಿಗೂ ಮರೆಯಬಾರದು. ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಶಾಲಾ ಪ್ರಧಾನ ಗುರುಗಳು, ಸಹ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸರ್ವ ಸದಸ್ಯರ ಸಹಕಾರದಿಂದ ಈ ಶಾಲೆ ಮಾದರಿಯಾಗಿದ್ದು, ಈ ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿಗಳು ಇನ್ನಷ್ಟು ಸಹಕರಿಸಿದರೆ ಮತ್ತಷ್ಟು ಅಭಿವೃದ್ಧಿ ಫಥದಲ್ಲಿ ಸಾಗುತ್ತದೆ ಎಂದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ತರಗತಿಯಲ್ಲಿ ಉತ್ತಮ ಅಂಕ ಪಡೆದ, ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗೆ ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ವಿ.ಡಿ. ಸಿದ್ದನಗೌಡರ ವಹಿಸಿದ್ದರು. ಶಾಲಾ ಪ್ರಧಾನ ಗುರು ಪಿ.ಬಿ. ಕೆಂಚನಗೌಡರ, ಪ.ಪಂ ಅಧ್ಯಕ್ಷೆ ಯಲ್ಲವ್ವ ಕವಲೂರ, ಬಿಇಓ ವಿ.ವಿ. ನಡುವಿನಮನಿ, ವಿ.ಎಂ. ಹಿರೇಮಠ, ಎಸ್.ಆರ್. ಬಂಡಿ, ಪ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಂ. ಶೇಖ, ಎಸ್.ಸಿ. ಬಡ್ನಿ, ವಿಜಯ ನೀಲಗುಂದ, ರಾಮಣ್ಣಾ ಕಮಾಜಿ, ಸಂಜಯ ನೀಲಗುಂದ, ಚಂದ್ರು ತೆಂಬದಮನಿ, ಪ್ರಲ್ಹಾದ ಯಾವಗಲ್ಲ, ಬಿ.ಜಿ. ಯಳವತ್ತಿ, ಮಂಜುನಾಥ ಮಟ್ಟಿ ಎಸ್.ಸಿ. ಅಮರಶೆಟ್ರ, ಮಾರುತಿ ಜಾಧವ, ಎಂ.ಎಂ. ಮೇಗಲಮನಿ, ಬೋಜರಾಜ ಹಡಪದ, ಎಸ್‌ಡಿಎಂಸಿ ಸರ್ವ ಸದಸ್ಯರು ಭಾಗವಹಿಸಿದ್ದರು.

ಶಿಕ್ಷಕ ಮಂಜುನಾಥ ಮಟ್ಟಿ ಮಾತನಾಡಿ, ಸರಕಾರಿ ಶಾಲೆಗಳು ಎಂದೆAದಿಗೂ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುವುದಿಲ್ಲ. ಪಾಲಕರು ಸರಕಾರಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಿದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಉತ್ತಮ ಸಂಸ್ಕಾರ ಹೊಂದಲು ಸಹಕಾರಿಯಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here