ಬೆಂಗಳೂರು: ಡಿಕೆಶಿ ಹಿಂದೂ ಎಂದು ಹೇಳಿದ ಮೇಲೆ ಕಾಂಗ್ರೆಸ್ ಅವರನ್ನು ಮೂಲೆಗುಂಪು ಮಾಡುತ್ತದೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಅಮಿತ್ ಶಾ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು,
ಡಿಕೆಶಿ ಅಮಿತ್ ಶಾ ಜೊತೆ ರಾಜಕೀಯ ವೇದಿಕೆ ಹಂಚಿಕೊಳ್ಳಲಿಲ್ಲ. ರಾಜಕೀಯೇತರ ವೇದಿಕೆಯಲ್ಲಿ ಅಮಿತ್ ಶಾ ಜೊತೆ ಪಾಲ್ಗೊಂಡಿದ್ದರು. ಸದ್ಗುರು ಆಹ್ವಾನ ಮೇರೆಗೆ ಡಿಕೆಶಿಯವರು ಅಲ್ಲಿಗೆ ಹೋಗಿದ್ದಾರೆ. ಅದಕ್ಕೆ ಕಾಂಗ್ರೆಸ್ನಲ್ಲಿ ಆಕ್ಷೇಪ ಬರುತ್ತಿರುವುದು ಸರಿಯಲ್ಲ ಎಂದರು.
ನಾನು ಹಿಂದೂ, ಹಿಂದುವಾಗಿ ಸಾಯುತ್ತೇನೆ” ಎಂದು ಡಿಕೆಶಿ ಹೇಳಿದ್ದಾರೆ. ಇದು ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿದಂತಿದೆ. ಕಾಂಗ್ರೆಸ್ ನಲ್ಲಿ ನಾಯಕತ್ವ ಉಳಿದಿಲ್ಲ, ದಡ್ಡರ ಗುಂಪಾಗಿದೆ, ಅಲ್ಲಿ ಕೆಲವರು ವಿಜೃಂಭಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಶಿ ತರೂರ್ ಹೇಳಿದ್ದಾರೆ ಎಂದು ಹೇಳಿದರು. ಅಲ್ಲದೆ ಡಿಕೆಶಿ ಹಿಂದೂ ಎಂದು ಹೇಳಿದ ಮೇಲೆ ಕಾಂಗ್ರೆಸ್ ಅವರನ್ನು ಮೂಲೆಗುಂಪು ಮಾಡುತ್ತದೆ ಎಂದು ಆರೋಪಿಸಿದರು.