ಬೆಂಗಳೂರು: ಡಿಕೆಶಿ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಮೋದಿ ಅವರು ಹಿಂದೆ ಭಾಗವಹಿಸಿದ್ದರು.
ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿವಹಿಸಿದ್ದೆವು. ಆದರೆ, ಕಾಂಗ್ರೆಸ್ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯುತ್ತಿರುವುದು ಅವರ ಪಕ್ಷದ ವಿಚಾರ ಎಂದು ಹೇಳಿದರು.
ಅದು ಆ ಪಕ್ಷದ ಅಪನಂಬಿಕೆ ಮತ್ತು ಗೊಂದಲದ ಸಂಕೇತ. ಅಪನಂಬಿಕೆ ಇದೆ, ಅದಕ್ಕೆ ಅಪಸ್ವರ ಇದೆ. ಡಿಕೆಶಿ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷಿಪ್ರವೇ ಆಗೋದು, ಓವರ್ ನೈಟ್ ಆಗೋದು. ಪ್ರಶ್ನೆ ಅದಲ್ಲ. ಆದರೆ, ನಮ್ಮ ತಿಳಿವಳಿಕೆಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.



