ಬೆಳಗಾವಿಯಲ್ಲಿ ಮರಾಠಿಗರ ಮೇಲೆ ನಡೆಯುತ್ತಿರುವ ದಬ್ಭಾಳಿಕೆ, MES ಪುಂಡಾಟಿಕೆ ಕನ್ನಡಿಗರನ್ನು ಕೆರಳಿಸುತ್ತಿದೆ. ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ಇಂದು ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಸುದ್ದಿಗೋಷ್ಠಿಯಲ್ಲಿ ನಟ ರಿಷಬ್ ಶೆಟ್ಟಿ ಮೇಲೆ ವಾಟಾಳ್ ನಾಗರಾಜ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಾವು ಬಹಳ ಗಂಭೀರವಾದ ಪರಿಸ್ಥಿತಿಯಲ್ಲಿ ಇದ್ದೇವೆ. ಇದು ನಮ್ಮ ರಾಜ್ಯದ ಗೌರವದ ಪ್ರಶ್ನೆ. ಬೆಳಗಾವಿಯಲ್ಲಿ ನಡೆದಿರೋ ಘಟನೆ ಇಡೀ ರಾಜ್ಯದ ಜನ ತಲೆತಗ್ಗಿಸುವಂತಿದೆ. ಸಾರಿಗೆ ಬಸ್ ಕಂಡಕ್ಟರ್ನ ಬೀದಿಯಲ್ಲಿ ಹೊಡೆಯುವ ಮಟ್ಟಕ್ಕೆ ಬೆಳಗಾವಿಯಲ್ಲಿ ಮರಾಠಿಗರು ಬಂದಿದ್ದಾರೆ. ಬೆಳಗಾವಿ ಕರ್ನಾಟಕದಲ್ಲಿ ಇದೆಯಾ ಅಥವಾ ಮಹಾರಾಷ್ಟ್ರದಲ್ಲಿ ಇದೆಯಾ ಎಂದು ವಾಟಾಳ್ ನಾಗರಾಜ್ ಪ್ರಶ್ನೆ ಮಾಡಿದ್ದಾರೆ.
ಇತ್ತೀಚೆಗೆ ಶಿವಾಜಿ ಹೆಸರಿನಲ್ಲೂ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿ ಅವರು ಕನ್ನಡಿಗರಿಗೆ ಕೆಟ್ಟ ಸಂದೇಶ ಕೊಡಲಿಕ್ಕೆ ಹೊರಟಿದ್ದಾರೆ ಎಂದು ವಾಟಾಳ್ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.