ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ: ಕೋಡಿಹಳ್ಳಿ ಶ್ರೀಗಳ ಭವಿಷ್ಯ

0
Spread the love

ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್​ರ ಇತ್ತೀಚಿನ ಒಂದೊಂದು ನಡೆಯೂ. ಒಂದೊಂದು ಹೇಳಿಕೆಯು ಕೇವಲ ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲ ರಾಷ್ಟ್ರ ರಾಜಕಾರಣದಲ್ಲೂ ಭಾರೀ ಸದ್ದು ಮಾಡ್ತಿವೆ. ಮಹಾಕುಂಭಮೇಳವನ್ನು ಕಾಂಗ್ರೆಸ್​ ಹೈಕಮಾಂಡ್​ ಟೀಕಿಸಿತ್ತು.

Advertisement

ಆದ್ರೆ ಡಿಸಿಎಂ ಡಿಕೆಶಿ ಅದೇ ಪ್ರಯಾಗ್​ರಾಜ್​ನ ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಇದು ಕಾಂಗ್ರೆಸ್​ಗೆ ಮುಖಭಂಗ ತರಿಸಿತು. ಇದೀಗ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಶಿವರಾತ್ರಿ ಧಾನ್ಯ ಮಾಡಿದ್ದು.. ಅದರಲ್ಲೂ ಅಮಿತ್​ ಶಾ ಜೊತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಕಾಂಗ್ರೆಸ್​ ಹೈಕಮಾಂಡ್​ನ ನಿದ್ದೆ ಗೆಡಿಸಿದಿದೆ. ಇದರ ಬೆನ್ನಲ್ಲೇ ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ ಎಂದು ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ಎಲ್ಲಾ ಸಮುದಾಯದ ಎಲ್ಲಾ ಜಾತಿ ಎಲ್ಲಾ ವರ್ಗದವರು ಈ ಭೂಮಿ ಮೇಲೆ ವಾಸವಿದ್ದಾರೆ. ಪ್ರಾಚೀನ ಕಾಲದಿಂದಲೂ ಹಾಲಮತ ಸಮಾಜ ಅಂತ ಆಂದ್ರೆ ಅಡವಿಯಲ್ಲಿದ್ದು ಕುರಿಗಳನ್ನ ಸಾಕೋದು ಮಾಡ್ತಾರೆ. ಕುರಿಯ ಇಕ್ಕಿಯಲ್ಲಿ ಲಿಂಗವನ್ನ ಕಂಡವರು. ಪ್ರಕೃತಿ ಮೇಲೆ ಗಾಳಿಯ ಮೇಲೆ ಭೂಮಿಯ ಮೇಲೆ ಅವರು ಅಡವಿಯಲ್ಲಿ ಇದ್ದು ಕಂಡದ್ದು ನೋಡಿದ್ದ ಅನುಭವಸಿದ್ದನ್ನ ಹೇಳುತ್ತಾ ಬಂದಿದ್ದಾರೆ ಅದು ಕುರುವಿನ ರಟ್ಟು.

ಹಾಲು ಕೆಟ್ಟರು ಹಾಲಮತ ಸಮಾಜ ಕೆಡುವುದಿಲ್ಲ ಅಂತ ಹೇಳುತ್ತಾರೆ. ಇವತ್ತು ಹಾಲಮತ ಸಮಾಜದವರ ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಅವರಾಗೇ ಬಿಡಬೇಕು. ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಮುಂದೆ ಏನಾಗುತ್ತೆ ಎಂದು ಯುಗಾದಿ ಮೇಲೆ ಹೇಳುತ್ತೇನೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here