ಚಿಕ್ಕೋಡಿ:- ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದಿರುವ ಘಟನೆ ಜರುಗಿದೆ.
Advertisement
ಕುಡಚಿ ಪಟ್ಟಣದ ವಾರ್ಡ್ ನಂಬರ ಎರಡರ ಮರಾಠಾ ಗಲ್ಲಿಯಲ್ಲಿ ಶನಿವಾರ ರಾತ್ರಿ ಪಟ್ಟಣದ ಅರ್ಚಕ ಪ್ರವೀಣ್ ಕುಲಕರ್ಣಿ ಎಂಬುವವರಿಗೆ ಸೇರಿದ ಬೈಕ್ ಗೆ ಮಕ್ಕಳ ಗುಂಪು ಬೆಂಕಿ ಹಚ್ಚಿದೆ. ಮಕ್ಕಳ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.