ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಮುಖ್ಯ ಶಿಕ್ಷಕಿ ಬಿ.ಜಿ. ಶಿರಸಿ ಮಾತನಾಡಿ, ವಿಜ್ಞಾನದ ಬೆಳವಣಿಗೆಯಿಂದ ತಂತ್ರಜ್ಞಾನದ ಮೂಲಕ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಯಾವುದೇ ವಿಚಾರಗಳ ಸತ್ಯತೆಯನ್ನು ವಿಜ್ಞಾನವು ತಿಳಿಸಿಕೊಡುತ್ತದೆ. ಇದರಿಂದ ಮೂಢನಂಬಿಕೆಗಳು ನಾಶವಾಗುತ್ತವೆ ಮತ್ತು ಜೀವನ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂದರು.
ನರೇಗಲ್ಲ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಬೇಲೇರಿ ಮಾತನಾಡಿ, ಸರ್ ಸಿ.ವಿ. ರಾಮನ್ ವಿಜ್ಞಾನ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರು ಸಂಶೋಧಿಸಿದ ರಾಮನ್ ಎಫೆಕ್ಟ್ ವಿಶ್ವಕ್ಕೆ ಅದ್ಭುತ ಕೊಡುಗೆಯಾಗಿದೆ. ಲೇಸರ್ ಆವಿಷ್ಕಾರ ಮತ್ತು ಕಂಪ್ಯೂಟರ್ ತಂತ್ರಜ್ಞಾನ ಬೆಳೆದಂತೆ ರಾಮನ್ ಎಫೆಕ್ಟ್ ಉಪಯೋಗ ಹೆಚ್ಚಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಿಕ್ಷಕ/ಕಿಯರಾದ ಕೆ.ಐ. ಕೋಳಿವಾಡ, ಎಂ.ವಿ. ಕಡೆತೋಟದ, ಐ.ಬಿ. ಒಂಟೇಲಿ, ಪೂರ್ಣಿಮಾ ಅಂಗಡಿ, ವಿ.ಪಿ. ಗ್ರಾಮಪುರೋಹಿತ, ಎಸ್.ವಿ. ಹಿರೇಮಠ, ವಿ.ಎಸ್. ಜಾಧವ, ಎಸ್.ಕೆ. ಕುಲಕರ್ಣಿ, ಸಾವಿತ್ರಿ ಮಾನ್ವಿ, ಎಂ.ಎಂ. ಸಿಳ್ಳಿನ, ಗೀತಾ ಶಿಂಧೆ, ಎನ್.ಜೆ. ಸಂಗನಾಳ, ಜೆ.ವಿ. ಕೆರಿಯವರ, ಅಕ್ಕಮಹಾದೇವಿ ಅಯ್ಯನಗೌಡ್ರ, ರಾಜೇಶ್ವರಿ ಈಟಿ, ಗೀತಾ ಕಂಬಳಿ, ರಜಿಯಾಬೇಗಂ, ವಿದ್ಯಾ ಮುಗಳಿ, ಜಯಶ್ರೀ ಮೆಣಸಗಿ, ವೀಣಾ ಯಾಳಗಿ, ಪದ್ಮಾವತಿ ಅಂಬಿಗೇರ, ಶ್ವೇತಾ ಹಿರೇಮಠ, ನೇತ್ರಾ ಸೋಬಾನದ, ನಂದಿತಾ ರಾಜೂರ, ಎಮ್. ಧರ್ಮಾಯತ್ ಸೇರಿದಂತೆ ಎಲ್ಲ ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದರು.