ಬೆಂಗಳೂರು;- ಮನೆಯಿಂದ ಹೊರ ಹೋದ ವ್ಯಕ್ತಿ ನಿರ್ಜನ ಪ್ರದೇಶದ ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೀಲಲಿಗೆ ಗ್ರಾಮದಲ್ಲಿ ಜರುಗಿದೆ.
Advertisement
ಮೃತ ಯುವಕನನ್ನು ಯಾಸಿನ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಶಾಲೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನೆನ್ನೆ ಮಕ್ಕಳಿಗೆ ತಿಂಡಿ ತರಲು ಮನೆಯಿಂದ ಹೊರ ಹೋದವ ಗ್ರಾಮದ ಯಲ್ಲಮ್ಮ ದೇವಾಲಯದ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೂಡಲೇ ಮಾಹಿತಿ ಆಧರಿಸಿ ಸೂರ್ಯಸಿಟಿ ಪೊಲೀಸರು, ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.