ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ಮೋಸ ಮಾಡುತ್ತಿದೆ: ಗೋವಿಂದ ಕಾರಜೋಳ ಕಿಡಿ

0
Spread the love

ಬೀದರ್: ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದಿನಗೂಲಿ ಕೆಲಸ ಮಾಡುವ ಕಾರ್ಮಿಕರು ಸೇರಿದಂತೆ ಯಾರಿಗೂ ಸಂಬಳ ಬಂದಿಲ್ಲ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಇಲ್ಲಿಯವರೆಗೂ 14 ಸಾವು, 35 ಸಾವಿರ ಕೋಟಿ ರೂ, ನುಂಗಿ ನೀರು ಕುಡಿದಿದ್ದಾರೆ.

Advertisement

ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯವರೇ ಇದೇನಾ ಸಾಮಾಜಿಕ ನ್ಯಾಯ? ಇದು ನ್ಯಾಯ ಅಲ್ಲ, ಅನ್ಯಾಯ. 7 ಲಕ್ಷ ಕೋಟಿ ರೂ.ಯ ಬಜೆಟ್ ಮಾಡುತ್ತಿದ್ದೀರಿ, ನೀವು ಜಿಲ್ಲೆಗೆ 60 ಸಾವಿರ ಕೋಟಿ ರೂ. ಅನುದಾನ ಕೊಡಬೇಕು. ಅಹಿಂದ ನಾಯಕರಿಂದ ಮಹಾ ಮೋಸವಾಗಿದೆ. ದಲಿತ ಸಚಿವರಿಗೆ ಮಾನ ಮರ್ಯಾದೆ ಇಲ್ಲ. ರಾಜೀನಾಮೆ ಕೊಟ್ಟು ಹೊರಗೆ ಬರಬೇಕು ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here