ಪಂ. ಪುಟ್ಟರಾಜ ಕವಿ ಗವಾಯಿಗಳ ಜಯಂತ್ಯುತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗಾನ ಗಂಧರ್ವ ಕಲಾ ಟ್ರಸ್ಟ್ ಗದಗ, ಡಾ. ಪಂ.ಪುಟ್ಟರಾಜ ಕವಿ ಗವಾಯಿಗಳವರ ಸಂಗೀತ ಪಾಠಶಾಲೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರ ದೇವಗಿರಿ ಇವರ ಸಹಯೋಗದಲ್ಲಿ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 111ನೇ ಜಯಂತ್ಯುತ್ಸವವನ್ನು ದೇವಗಿರಿಯಲ್ಲಿ ಆಚರಿಸಲಾಯಿತು.

Advertisement

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಪೂಜ್ಯಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು ವಹಿಸಿದ್ದರು. ಸಾನ್ನಿಧ್ಯವನ್ನು ಕೂಡಲ ಗುರು ನಂಜೇಶ್ವರಮಠದ ಪೂಜ್ಯಶ್ರೀ ಗುರುಮಹೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ಮುಂಡರಗಿ ಬ್ರಹನ್ಮಠ ಪೂಜ್ಯಶ್ರೀ ಡಾ. ವೀರೇಶ್ವರ ಶರಣರು ಸಮ್ಮುಖ ವಹಿಸಿದ್ದರು.

ದೇವಗಿರಿಯ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಸಂಗೀತ ಪಾಠಶಾಲೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಕುಮಾರಸ್ವಾಮಿ ಗಡ್ಡದಮಠ ಉಪಸ್ಥಿತರಿದ್ದರು.

ಮಾಜಿ ಶಾಸಕ ಶಿವರಾಜ ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಆಯೋಗದ ಜಿಲ್ಲಾದ್ಯಕ್ಷ ಎಸ್.ಆರ್. ಪಾಟೀಲ, ಗದುಗಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಹಾವೇರಿ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಕಟ್ಟಿ, ಗದುಗಿನ ನವರತ್ನ ಜ್ಯುವೆಲರ್ಸ್ ಮಾಲೀಕ ಶಿದ್ದಲಿಂಗೇಶ ಮೂರಶಿಳ್ಳಿನ, ಹುಬ್ಬಳ್ಳಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಅನಿಲಕುಮಾರ ನಂದಿ, ಪ್ರಾಚಾರ್ಯ ಡಾ.ವೈಶಾಲಿ ಮುಂಗರವಾಡಿ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 8 ಜೋಡಿಗಳ ಸಾಮೂಹಿಕ ವಿಹಾಹ ಜರುಗಿದವು. ಸಂಜೆ ಧರ್ಮಸಭೆ, ಶ್ರೀಗುರು ಪುಟ್ಟರಾಜ ಪುರಸ್ಕಾರ-2025 ಸಮಾರಂಭ ಜರುಗಿತು. ಕಲಾವಿದರಿಗೆ, ಗಾಯನಶ್ರೀ, ವಾದನಶ್ರೀ, ಸಾಹಿತ್ಯಶ್ರೀ ರಂಗಶ್ರೀ, ಕೀರ್ತನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂತರ ಪೂಜ್ಯರ ಭಾವಚಿತ್ರವನ್ನು ತೊಟ್ಟಿಲಲ್ಲಿ ಇಟ್ಟು ಜೋಗುಳ ಹಾಡಿದರು.

ಇದಕ್ಕೂ ಮುನ್ನ ಬೆಳಗ್ಗೆ 8 ಗಂಟೆಗೆ ಗುರುಗಳ ಭಾವಚಿತ್ರದೊಂದಿಗೆ ಮೆರವಣಿಗೆ ಜರುಗಿತು.


Spread the love

LEAVE A REPLY

Please enter your comment!
Please enter your name here