ಬೆಳಗಾವಿ:- ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಪ್ರೇಮಿಗಳಿಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ. ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ.
18 ವರ್ಷದ ಐಶ್ವರ್ಯಾ ಮಹೇಶ್ ಲೋಹಾರ ಕೊಲೆಯಾದ ಯುವತಿ ಆಗಿದ್ದು, 29 ವರ್ಷದ ಪ್ರಶಾಂತ್ ಯಲ್ಲಪ್ಪ ಕುಂಡೇಕರ ಪ್ರೇಯಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಇಂದು ಸಂಜೆ ಈ ಜೋಡಿ, ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದೆ. ನಂತರ ಪ್ರಶಾಂತ್, ಚಾಕುವಿನಿಂದ ಪ್ರೇಯಸಿ ಐಶ್ವರ್ಯಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕತ್ತು ಕೊಯ್ದುಕೊಂಡು ಪ್ರಾಣಬಿಟ್ಟಿದ್ದಾನೆ.
ಐಶ್ವರ್ಯಾ ಮಹೇಶ್ ಲೋಹಾರ ಹಾಗೂ ಪ್ರಶಾಂತ್ ಯಲ್ಲಪ್ಪ ಕುಂಡೇಕರ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಈ ಜೋಡಿ ಇಂದು ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿರುವ ಐಶ್ವರ್ಯಾಳ ಚಿಕ್ಕಮ್ಮನ ಮನೆ ಬಂದಿತ್ತು. ಆಗ ಏನಾಯ್ತೋ ಏನೋ ಇಬ್ಬರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬಳಿಕ ಪ್ರಶಾಂತ್ ಏಕಾಏಕಿ ಚಾಕುವಿನಿಂದ ಪ್ರೇಯಸಿ ಐಶ್ವರ್ಯಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಪ್ರಕಾಶ್ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.



