ಬೆಂಗಳೂರು: ಭಿಕ್ಷೆ ಬೇಡೋ ಸ್ಥಿತಿಗೆ ಸಿಎಂ ಸಿದ್ದರಾಮಯ್ಯ ಬಂದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ದಲಿತರ ಹಣ ಲೂಟಿ ಮಾಡಿದೆ. ಗ್ಯಾರಂಟಿಗಾಗಿ ದಲಿತರ ಹಣ ಬಳಸಲಾಗಿದೆ. ನಾನು ಸಿದ್ದಣ್ಣ ಲೂಟಿ ಗ್ಯಾರಂಟಿಯ ಅಣ್ಣ ಎಂಬಂತಾಗಿದೆ.
Advertisement
ಭಿಕ್ಷೆ ಬೇಡೋ ಸ್ಥಿತಿಗೆ ಸಿಎಂ ಸಿದ್ದರಾಮಯ್ಯ ಬಂದಿದ್ದಾರೆ ಎಂದು ಲೇವಡಿ ಮಾಡಿದರು. ಸಿದ್ದರಾಮಯ್ಯ 1ಸಾವಿರ ಕೋಟಿ ಸಾಲ ಮಾಡಿದ್ದು, ಈ ಹಿಂದೆ ಯಾರೂ ಇಷ್ಟು ಸಾಲ ಮಾಡಿಲ್ಲ. ಅದಕ್ಕೆ ಸಿದ್ದರಾಮಯ್ಯರನ್ನ ಲೂಟಿರಾಮಯ್ಯ ಅನ್ನೋದು ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.